ಹುಬ್ಬಳ್ಳಿ: ಮುಂಬರುವ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ಅವರನ್ನು ಸ್ಥಳಾಂತರಿಸಬೇಕು ಎಂಬ ವೀರಶೈವ-ಲಿಂಗಾಯಿತ ಸ್ವಾಮೀಜಿಗಳ ಒತ್ತಾಯವನ್ನು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ತಿರಸ್ಕರಿಸಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಶಿರಹಟ್ಟಿ ಫಕೀರ ದಿಂಗಾಲೇಶ್ವ ಸ್ವಾಮೀಜಿ ಜೋಶಿ ಅವರ ಬಗ್ಗೆ ಬಹುಶಃ ತಪ್ಪಾಗಿ ತಿಳಿದಿರಬೇಕು. ಸ್ವಾಮೀಜಿಗಳ ಮನವೊಲಿಸುವ ಕೆಲಸ ಮಾಡಲಾಗುವುದು ಎಂದರು.
ಎಲ್ಲಾ ಸಮಾಜದ ಸ್ವಾಮಿಗಳು ಜೋಶಿ ಅವರ ಪರವಾಗಿದ್ದಾರೆ. ಅವರು ಒಬ್ಬ ಜನಪ್ರಿಯ ನಾಯಕರಾಗಿದ್ದು, ಈ ಬಾರಿ ಬಹು ದೊಡ್ಡ ಅಂತರದಿಂದ ಜಯ ಗಳಿಸುವ ವಿಶ್ವಾಸವಿದೆ. ಸ್ವಾಮೀಜಿ ಅವರ ಈ ಆರೋಪದ ಹಿಂದೆ ನಮ್ಮ ಪಕ್ಷದವರು ಯಾರೂ ಇಲ್ಲ. ಇವೆಲ್ಲವೂ ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದರು.
ಜೋಶಿ ಅವರ ನಾಯಕತ್ವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿಕೊಂಡು, ಸಂಪುಟದಲ್ಲಿ ಉನ್ನತ ಸ್ಥಾನ ನೀಡಿದ್ದಾರೆ. ನೋಡುವವರಲ್ಲಿ ಕೆಲವೊಂದು ತಪ್ಪು ತಿಳುವಳಿಕೆ ಇದ್ದಿರಬಹುದು. ಎಲ್ಲರೊಂದಿಗೂ ಮಾತನಾಡಿ ಸಮಸ್ಯೆ ಪರಿಹರಿಸಲಾಗುವುದು ಎಂದು ಮಾಜಿ ಸಿಎಂ ಬಿಎಸ್ವೈ ಇದೇ ಸಂದರ್ಭದಲ್ಲಿ ಹೇಳಿದರು.
ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು, ಧಾರವಾಡ ಕ್ಷೇತ್ರಕ್ಕೆ ಪ್ರಹ್ಲಾದ್ ಜೋಶಿ ಬದಲಿಗೆ ಸೂಕ್ತ ಅಭ್ಯರ್ಥಿಯನ್ನು ಹಾಕಬೇಕು. ಇದಕ್ಕೆ ಮಾರ್ಚ್ 31 ಕೊನೆಯ ದಿನಾಂಕ. ಬದಲಾಯಿಸದೇ ಇದ್ದರೇ ಏಪ್ರಿಲ್ 2ರಂದು ಮತ್ತೆ ಸಭೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…