ರಾಜ್ಯ

ಬರ ಪರಿಹಾರ ಕುರಿತು ಪ್ರಮುಖ ನಾಯಕರ ಪರ-ವಿರೋಧದ ಹೇಳಿಕೆ !

ಬೆಂಗಳೂರು : ರಾಜ್ಯ ಬರ ಪರಿಹಾರ ಬಿಡುಗೆಡೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ೩೪೫೪ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪರಿಹಾರ ಬಿಡುಗಡೆ ಮಾಡಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿತು.

ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯಲ್ಲಿ ರಾಜ್ಯಕ್ಕೆ ಒಟ್ಟಾರೆ ೧೮೧೭೨ ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು.
ಆದರೆ ಇದೀಗ ಸುಪ್ರೀಂ ಕೋರ್ಟ್‌ ಸೂಚನೆಯ ಮೇರೆಗೆ ಕೇವಲ ೩೪೫೪ ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದೆ.

ಕೋರ್ಟ್‌ ಆದೇಶದ ಮೇರೆಗೆ ಒಂದು ವಾರದಲ್ಲಿ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಕೋರ್ಟ್‌ಗೆ ತಿಳಿಸಿತ್ತು. ಅಂತೆಯೆ ಹಣ ಬಿಡುಗಡೆ ಮಾಡಿದೆ. ಆದರೆ ಮನವಿ ಮಡಿದ್ದಷ್ಟು ಹಣವನ್ನು ಬಿಡುಗಡೆ ಮಾಡಿಲ್ಲವೆಂದು ರಾಜ್ಯ ಕಾಂಗ್ರೆಸ್‌ ನಾಯಕರು ಕಿಡಿಕಾರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌, ಕಾನೂನಾತ್ಮಕವಾಗಿ ಡಿಸೆಂಬರ್‌ ತಿಂಗಳೀನಲ್ಲಿ ಬಿಡುಗಡೆ ಮಾಡಬೇಕಾಗಿದ್ದ ಬರ ಪರಿಹಾರವನ್ನು ನೀಡದೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿತ್ತು.

ಅಂತಿಮವಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗಿ ಆ ಮುಖಾಂತರವಾಗಿ ಪರಿಹಾರ ನೀಡುವಂತೆ ಮಾಡಿದ್ದೇವೆ. ಈ ಮೂಲಕ ಬಿಜೆಪಿಯ ಮೋಸ ಹೊರಗೆ ಬಂದಿದೆ ಎಂದರು. ಜನರ ಹಿತಕ್ಕೆ ಸಂಬಂಧಪಟ್ಟ ವಿಚಾರಗಳಲ್ಲಿ ಸೇಡಿನ ರಾಜಕಾರಣ ಬಿಟ್ಟುಬಿಡಿ ಎಂದು ಕಿವಿ ಮಾತು ಹೇಳಿದರು.

ಕೇಳಿದಷ್ಟು ಕೊಡಲು ಸಾಧ್ಯವೇ : ಹೆಚ್‌.ಡಿ.ಕುಮಾರಸ್ವಾಮಿ !
ಕೇಂದ್ರ ಸ್ರಕಾರ ಬಿಡುಗಡೆ ಮಾಡಿರುವ ಬರ ಪರಿಹಾರ ಹಣ ಸಾಕಾಗಲ್ಲ ಎಂದರೆ ಇವರು ಕೇಳಿದಷ್ಟು ಹಣ ಕೋಡಲು ಸಾಧ್ಯವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಕಡಿಕಾರಿದ್ದಾರೆ. ರಾಜ್ಯ ಸರ್ಕಾರ ಮನವಿ ಮಾಡಿದಷ್ಟು ಬರ ಪರಿಹಾರ ಹಣ ಕೇಂದ್ರ ನೀಡಿಲ್ಲವೆಂದು ಕೈ ನಾಯಕರು ಆರೋಪಿಸುತ್ತಿರುವ ಬೆನ್ನಲ್ಲೆ ಹೆಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

5 hours ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

7 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

7 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

8 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

8 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

9 hours ago