ಬೆಂಗಳೂರು : ರಾಜ್ಯ ಬರ ಪರಿಹಾರ ಬಿಡುಗೆಡೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ೩೪೫೪ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಪರಿಹಾರ ಬಿಡುಗಡೆ ಮಾಡಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿತು.
ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯಲ್ಲಿ ರಾಜ್ಯಕ್ಕೆ ಒಟ್ಟಾರೆ ೧೮೧೭೨ ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು.
ಆದರೆ ಇದೀಗ ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ಕೇವಲ ೩೪೫೪ ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದೆ.
ಕೋರ್ಟ್ ಆದೇಶದ ಮೇರೆಗೆ ಒಂದು ವಾರದಲ್ಲಿ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಕೋರ್ಟ್ಗೆ ತಿಳಿಸಿತ್ತು. ಅಂತೆಯೆ ಹಣ ಬಿಡುಗಡೆ ಮಾಡಿದೆ. ಆದರೆ ಮನವಿ ಮಡಿದ್ದಷ್ಟು ಹಣವನ್ನು ಬಿಡುಗಡೆ ಮಾಡಿಲ್ಲವೆಂದು ರಾಜ್ಯ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಕಾನೂನಾತ್ಮಕವಾಗಿ ಡಿಸೆಂಬರ್ ತಿಂಗಳೀನಲ್ಲಿ ಬಿಡುಗಡೆ ಮಾಡಬೇಕಾಗಿದ್ದ ಬರ ಪರಿಹಾರವನ್ನು ನೀಡದೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿತ್ತು.
ಅಂತಿಮವಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಹೋಗಿ ಆ ಮುಖಾಂತರವಾಗಿ ಪರಿಹಾರ ನೀಡುವಂತೆ ಮಾಡಿದ್ದೇವೆ. ಈ ಮೂಲಕ ಬಿಜೆಪಿಯ ಮೋಸ ಹೊರಗೆ ಬಂದಿದೆ ಎಂದರು. ಜನರ ಹಿತಕ್ಕೆ ಸಂಬಂಧಪಟ್ಟ ವಿಚಾರಗಳಲ್ಲಿ ಸೇಡಿನ ರಾಜಕಾರಣ ಬಿಟ್ಟುಬಿಡಿ ಎಂದು ಕಿವಿ ಮಾತು ಹೇಳಿದರು.
ಕೇಳಿದಷ್ಟು ಕೊಡಲು ಸಾಧ್ಯವೇ : ಹೆಚ್.ಡಿ.ಕುಮಾರಸ್ವಾಮಿ !
ಕೇಂದ್ರ ಸ್ರಕಾರ ಬಿಡುಗಡೆ ಮಾಡಿರುವ ಬರ ಪರಿಹಾರ ಹಣ ಸಾಕಾಗಲ್ಲ ಎಂದರೆ ಇವರು ಕೇಳಿದಷ್ಟು ಹಣ ಕೋಡಲು ಸಾಧ್ಯವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಡಿಕಾರಿದ್ದಾರೆ. ರಾಜ್ಯ ಸರ್ಕಾರ ಮನವಿ ಮಾಡಿದಷ್ಟು ಬರ ಪರಿಹಾರ ಹಣ ಕೇಂದ್ರ ನೀಡಿಲ್ಲವೆಂದು ಕೈ ನಾಯಕರು ಆರೋಪಿಸುತ್ತಿರುವ ಬೆನ್ನಲ್ಲೆ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…
ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…
ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…