ಬೆಂಗಳೂರು : ರಾಜ್ಯ ಬರ ಪರಿಹಾರ ಬಿಡುಗೆಡೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ೩೪೫೪ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಪರಿಹಾರ ಬಿಡುಗಡೆ ಮಾಡಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿತು.
ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯಲ್ಲಿ ರಾಜ್ಯಕ್ಕೆ ಒಟ್ಟಾರೆ ೧೮೧೭೨ ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು.
ಆದರೆ ಇದೀಗ ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ಕೇವಲ ೩೪೫೪ ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದೆ.
ಕೋರ್ಟ್ ಆದೇಶದ ಮೇರೆಗೆ ಒಂದು ವಾರದಲ್ಲಿ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಕೋರ್ಟ್ಗೆ ತಿಳಿಸಿತ್ತು. ಅಂತೆಯೆ ಹಣ ಬಿಡುಗಡೆ ಮಾಡಿದೆ. ಆದರೆ ಮನವಿ ಮಡಿದ್ದಷ್ಟು ಹಣವನ್ನು ಬಿಡುಗಡೆ ಮಾಡಿಲ್ಲವೆಂದು ರಾಜ್ಯ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಕಾನೂನಾತ್ಮಕವಾಗಿ ಡಿಸೆಂಬರ್ ತಿಂಗಳೀನಲ್ಲಿ ಬಿಡುಗಡೆ ಮಾಡಬೇಕಾಗಿದ್ದ ಬರ ಪರಿಹಾರವನ್ನು ನೀಡದೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿತ್ತು.
ಅಂತಿಮವಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಹೋಗಿ ಆ ಮುಖಾಂತರವಾಗಿ ಪರಿಹಾರ ನೀಡುವಂತೆ ಮಾಡಿದ್ದೇವೆ. ಈ ಮೂಲಕ ಬಿಜೆಪಿಯ ಮೋಸ ಹೊರಗೆ ಬಂದಿದೆ ಎಂದರು. ಜನರ ಹಿತಕ್ಕೆ ಸಂಬಂಧಪಟ್ಟ ವಿಚಾರಗಳಲ್ಲಿ ಸೇಡಿನ ರಾಜಕಾರಣ ಬಿಟ್ಟುಬಿಡಿ ಎಂದು ಕಿವಿ ಮಾತು ಹೇಳಿದರು.
ಕೇಳಿದಷ್ಟು ಕೊಡಲು ಸಾಧ್ಯವೇ : ಹೆಚ್.ಡಿ.ಕುಮಾರಸ್ವಾಮಿ !
ಕೇಂದ್ರ ಸ್ರಕಾರ ಬಿಡುಗಡೆ ಮಾಡಿರುವ ಬರ ಪರಿಹಾರ ಹಣ ಸಾಕಾಗಲ್ಲ ಎಂದರೆ ಇವರು ಕೇಳಿದಷ್ಟು ಹಣ ಕೋಡಲು ಸಾಧ್ಯವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಡಿಕಾರಿದ್ದಾರೆ. ರಾಜ್ಯ ಸರ್ಕಾರ ಮನವಿ ಮಾಡಿದಷ್ಟು ಬರ ಪರಿಹಾರ ಹಣ ಕೇಂದ್ರ ನೀಡಿಲ್ಲವೆಂದು ಕೈ ನಾಯಕರು ಆರೋಪಿಸುತ್ತಿರುವ ಬೆನ್ನಲ್ಲೆ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…