ಮಂಡ್ಯ: ಪಾಕ್ ಪರ ಘೋಷಣೆ ಕೂಗಿದ್ದಾರೆಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ದೂರು ನೀಡಿದೆ.
2022ರ ಡಿಸೆಂಬರ್ 18 ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ಪಾಕಿಸ್ತಾನ್ ಪರ ಘೋಷಣೆ ಕೂಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಂಡ್ಯದ ಸಂಜಯ್ ವೃತ್ತದಲ್ಲಿ 2022 ಡಿಸೆಂಬರ್ 18 ರಂದು ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಪಾಕ್ ವಿದೇಶಾಂಗ ಸಚಿವನ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತರು. ಘೋಷಣೆ ಕೂಗುವ ಬರದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು.
ಒಂದೂವರೆ ವರ್ಷದ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಕನ್ನಂಬಾಡಿ ಕುಮಾರ್ ಎಂಬುವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ದೂರಿನನ್ವಯ ಬಿಜೆಪಿ ಕಾರ್ಯಕರ್ತರಾದ ರವಿ, ಶಿವಕುಮಾರ್ ಆರಾಧ್ಯ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು, ಸದ್ಯ ಬಿಜೆಪಿ ಕಾರ್ಯಕರ್ತ ರವಿಯನ್ನು ವಶಕ್ಕೆ ಪಡೆದಿದ್ದಾರೆ.
ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯೇಕವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…
ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ…
ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ…
ನಮ್ಮ ತಂದೆ ಪೋರ್ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…