ಮಂಡ್ಯ: ಪಾಕ್ ಪರ ಘೋಷಣೆ ಕೂಗಿದ್ದಾರೆಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ದೂರು ನೀಡಿದೆ.
2022ರ ಡಿಸೆಂಬರ್ 18 ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ಪಾಕಿಸ್ತಾನ್ ಪರ ಘೋಷಣೆ ಕೂಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಂಡ್ಯದ ಸಂಜಯ್ ವೃತ್ತದಲ್ಲಿ 2022 ಡಿಸೆಂಬರ್ 18 ರಂದು ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಪಾಕ್ ವಿದೇಶಾಂಗ ಸಚಿವನ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತರು. ಘೋಷಣೆ ಕೂಗುವ ಬರದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು.
ಒಂದೂವರೆ ವರ್ಷದ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಕನ್ನಂಬಾಡಿ ಕುಮಾರ್ ಎಂಬುವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ದೂರಿನನ್ವಯ ಬಿಜೆಪಿ ಕಾರ್ಯಕರ್ತರಾದ ರವಿ, ಶಿವಕುಮಾರ್ ಆರಾಧ್ಯ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು, ಸದ್ಯ ಬಿಜೆಪಿ ಕಾರ್ಯಕರ್ತ ರವಿಯನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…