ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ದೃಢವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿರುವುದು ದೃಢವಾಗಿದೆ. ಆದರೆ ಯಾರು ಕೂಗಿದ್ದಾರೆ ಎಂಬುದು ಬಹಿರಂಗಗೊಂಡಿಲ್ಲ. ಆರೋಪಿಗಳ ಬಂಧನದಿಂದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಮುಜುಗರವಿಲ್ಲ. ಯಾರೇ ಆಗಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ನಾನು ಹೇಳುತ್ತಿದ್ದೆ ಎಫ್ಎಸ್ಎಲ್ ವರದಿ ಬರಲಿ ಕ್ರಮ ಕೈಗೊಳ್ಳುತ್ತೇವೆ ಅಂತ. ಖಾಸಗಿಯವರು ಕೂಡ ಎಫ್ಎಸ್ಎಲ್ ವರದಿ ಬಿಡುಗಡೆ ಮಾಡಿದ್ದರು. ಆದರೆ ಇದನ್ನು ಅಧಿಕೃತ ಅಂತ ಹೇಳಲು ಆಗಲ್ಲ. ನಮ್ಮ ಗೃಹ ಇಲಾಖೆಯ ಎಫ್ಎಸ್ಎಲ್ ವರದಿ ಆಧಾರದ ಮೇಲೆ ಬಂಧನ ಮಾಡಿದ್ದೇವೆ. ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಇನ್ನು ವಿರೋಧ ಪಕ್ಷದವರು ಸುಮ್ಮನೇ ಹೇಳುತ್ತಿರುತ್ತಾರೆ. ಅವರು ಹೇಳುತ್ತಾರೆ ಅಂತ ಬಂಧಿಸಲಾಗುತ್ತಾ ? ಮಂಡ್ಯದಲ್ಲಿ ಬಿಜೆಪಿಯವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಹೀಗಾಗಿ ಕ್ರಮ ಕೈಗೊಂಡಿದ್ದೇವೆ. ಯಾವ ಕಾರಣಕ್ಕೆ ಕೂಗಿದ್ದಾರೆಂದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ನ್ಯಾಯ ಅನ್ನೋದು ಎಲ್ಲರಿಗೂ ಒಂದೇ ಅಲ್ವಾ? 2022ರಲ್ಲಿ ನಾವು ಅಧಿಕಾರದಲ್ಲಿ ಇರಲಿಲ್ಲ. ನಾವು ಹಳೆಯ ಪ್ರಕರಣ ಗಮನಿಸಿರಲಿಲ್ಲ. ಈಗ ಗಮನಿಸಿ ಪ್ರಕರಣ ದಾಖಲಾಗಿದೆ. ಮಂಡ್ಯದಲ್ಲಿ ಎಫ್ಐಆರ್ ಆಗಿದ್ದು, ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಎಂದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…