ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ದೃಢವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿರುವುದು ದೃಢವಾಗಿದೆ. ಆದರೆ ಯಾರು ಕೂಗಿದ್ದಾರೆ ಎಂಬುದು ಬಹಿರಂಗಗೊಂಡಿಲ್ಲ. ಆರೋಪಿಗಳ ಬಂಧನದಿಂದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಮುಜುಗರವಿಲ್ಲ. ಯಾರೇ ಆಗಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ನಾನು ಹೇಳುತ್ತಿದ್ದೆ ಎಫ್ಎಸ್ಎಲ್ ವರದಿ ಬರಲಿ ಕ್ರಮ ಕೈಗೊಳ್ಳುತ್ತೇವೆ ಅಂತ. ಖಾಸಗಿಯವರು ಕೂಡ ಎಫ್ಎಸ್ಎಲ್ ವರದಿ ಬಿಡುಗಡೆ ಮಾಡಿದ್ದರು. ಆದರೆ ಇದನ್ನು ಅಧಿಕೃತ ಅಂತ ಹೇಳಲು ಆಗಲ್ಲ. ನಮ್ಮ ಗೃಹ ಇಲಾಖೆಯ ಎಫ್ಎಸ್ಎಲ್ ವರದಿ ಆಧಾರದ ಮೇಲೆ ಬಂಧನ ಮಾಡಿದ್ದೇವೆ. ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಇನ್ನು ವಿರೋಧ ಪಕ್ಷದವರು ಸುಮ್ಮನೇ ಹೇಳುತ್ತಿರುತ್ತಾರೆ. ಅವರು ಹೇಳುತ್ತಾರೆ ಅಂತ ಬಂಧಿಸಲಾಗುತ್ತಾ ? ಮಂಡ್ಯದಲ್ಲಿ ಬಿಜೆಪಿಯವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಹೀಗಾಗಿ ಕ್ರಮ ಕೈಗೊಂಡಿದ್ದೇವೆ. ಯಾವ ಕಾರಣಕ್ಕೆ ಕೂಗಿದ್ದಾರೆಂದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ನ್ಯಾಯ ಅನ್ನೋದು ಎಲ್ಲರಿಗೂ ಒಂದೇ ಅಲ್ವಾ? 2022ರಲ್ಲಿ ನಾವು ಅಧಿಕಾರದಲ್ಲಿ ಇರಲಿಲ್ಲ. ನಾವು ಹಳೆಯ ಪ್ರಕರಣ ಗಮನಿಸಿರಲಿಲ್ಲ. ಈಗ ಗಮನಿಸಿ ಪ್ರಕರಣ ದಾಖಲಾಗಿದೆ. ಮಂಡ್ಯದಲ್ಲಿ ಎಫ್ಐಆರ್ ಆಗಿದ್ದು, ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಎಂದರು.
ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…
ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…
ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ…
ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…
ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…