ರಾಜ್ಯ

ಪಾಕ್‌ ಪರ ಘೋಷಣೆ ಕೂಗಿರುವುದು ಎಫ್‌ಎಸ್‌ಎಲ್‌ ವರದಿಯಲ್ಲಿ ದೃಢ: ಗೃಹ ಸಚಿವ

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ದೃಢವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕ್‌ ಪರ ಘೋಷಣೆ ಕೂಗಿರುವುದು ದೃಢವಾಗಿದೆ. ಆದರೆ ಯಾರು ಕೂಗಿದ್ದಾರೆ ಎಂಬುದು ಬಹಿರಂಗಗೊಂಡಿಲ್ಲ. ಆರೋಪಿಗಳ ಬಂಧನದಿಂದ ಕಾಂಗ್ರೆಸ್‌ ಸರ್ಕಾರಕ್ಕೆ ಯಾವುದೇ ಮುಜುಗರವಿಲ್ಲ. ಯಾರೇ ಆಗಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ನಾನು ಹೇಳುತ್ತಿದ್ದೆ ಎಫ್​ಎಸ್​ಎಲ್​ ವರದಿ ಬರಲಿ ಕ್ರಮ ಕೈಗೊಳ್ಳುತ್ತೇವೆ ಅಂತ. ಖಾಸಗಿಯವರು ಕೂಡ ಎಫ್​ಎಸ್​ಎಲ್​​ ವರದಿ ಬಿಡುಗಡೆ ಮಾಡಿದ್ದರು. ಆದರೆ ಇದನ್ನು ಅಧಿಕೃತ ಅಂತ ಹೇಳಲು ಆಗಲ್ಲ. ನಮ್ಮ ಗೃಹ ಇಲಾಖೆಯ ಎಫ್​ಎಸ್​ಎಲ್​ ವರದಿ ಆಧಾರದ ಮೇಲೆ ಬಂಧನ ಮಾಡಿದ್ದೇವೆ‌. ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಇನ್ನು ವಿರೋಧ ಪಕ್ಷದವರು ಸುಮ್ಮನೇ ಹೇಳುತ್ತಿರುತ್ತಾರೆ. ಅವರು ಹೇಳುತ್ತಾರೆ ಅಂತ ಬಂಧಿಸಲಾಗುತ್ತಾ ? ಮಂಡ್ಯದಲ್ಲಿ ಬಿಜೆಪಿಯವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಹೀಗಾಗಿ ಕ್ರಮ ಕೈಗೊಂಡಿದ್ದೇವೆ. ಯಾವ ಕಾರಣಕ್ಕೆ ಕೂಗಿದ್ದಾರೆಂದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ನ್ಯಾಯ ಅನ್ನೋದು ಎಲ್ಲರಿಗೂ ಒಂದೇ ಅಲ್ವಾ? 2022ರಲ್ಲಿ ನಾವು ಅಧಿಕಾರದಲ್ಲಿ ಇರಲಿಲ್ಲ. ನಾವು ಹಳೆಯ ಪ್ರಕರಣ ಗಮನಿಸಿರಲಿಲ್ಲ. ಈಗ ಗಮನಿಸಿ ಪ್ರಕರಣ ದಾಖಲಾಗಿದೆ. ಮಂಡ್ಯದಲ್ಲಿ ಎಫ್​ಐಆರ್​ ಆಗಿದ್ದು, ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಎಂದರು.

andolana

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

9 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

10 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

11 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

16 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

23 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

23 hours ago