ರಾಜ್ಯ

ಪಾಕ್‌ ಪರ ಘೋಷಣೆ ಕೂಗಿರುವುದು ಎಫ್‌ಎಸ್‌ಎಲ್‌ ವರದಿಯಲ್ಲಿ ದೃಢ: ಗೃಹ ಸಚಿವ

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ದೃಢವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕ್‌ ಪರ ಘೋಷಣೆ ಕೂಗಿರುವುದು ದೃಢವಾಗಿದೆ. ಆದರೆ ಯಾರು ಕೂಗಿದ್ದಾರೆ ಎಂಬುದು ಬಹಿರಂಗಗೊಂಡಿಲ್ಲ. ಆರೋಪಿಗಳ ಬಂಧನದಿಂದ ಕಾಂಗ್ರೆಸ್‌ ಸರ್ಕಾರಕ್ಕೆ ಯಾವುದೇ ಮುಜುಗರವಿಲ್ಲ. ಯಾರೇ ಆಗಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ನಾನು ಹೇಳುತ್ತಿದ್ದೆ ಎಫ್​ಎಸ್​ಎಲ್​ ವರದಿ ಬರಲಿ ಕ್ರಮ ಕೈಗೊಳ್ಳುತ್ತೇವೆ ಅಂತ. ಖಾಸಗಿಯವರು ಕೂಡ ಎಫ್​ಎಸ್​ಎಲ್​​ ವರದಿ ಬಿಡುಗಡೆ ಮಾಡಿದ್ದರು. ಆದರೆ ಇದನ್ನು ಅಧಿಕೃತ ಅಂತ ಹೇಳಲು ಆಗಲ್ಲ. ನಮ್ಮ ಗೃಹ ಇಲಾಖೆಯ ಎಫ್​ಎಸ್​ಎಲ್​ ವರದಿ ಆಧಾರದ ಮೇಲೆ ಬಂಧನ ಮಾಡಿದ್ದೇವೆ‌. ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಇನ್ನು ವಿರೋಧ ಪಕ್ಷದವರು ಸುಮ್ಮನೇ ಹೇಳುತ್ತಿರುತ್ತಾರೆ. ಅವರು ಹೇಳುತ್ತಾರೆ ಅಂತ ಬಂಧಿಸಲಾಗುತ್ತಾ ? ಮಂಡ್ಯದಲ್ಲಿ ಬಿಜೆಪಿಯವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಹೀಗಾಗಿ ಕ್ರಮ ಕೈಗೊಂಡಿದ್ದೇವೆ. ಯಾವ ಕಾರಣಕ್ಕೆ ಕೂಗಿದ್ದಾರೆಂದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ನ್ಯಾಯ ಅನ್ನೋದು ಎಲ್ಲರಿಗೂ ಒಂದೇ ಅಲ್ವಾ? 2022ರಲ್ಲಿ ನಾವು ಅಧಿಕಾರದಲ್ಲಿ ಇರಲಿಲ್ಲ. ನಾವು ಹಳೆಯ ಪ್ರಕರಣ ಗಮನಿಸಿರಲಿಲ್ಲ. ಈಗ ಗಮನಿಸಿ ಪ್ರಕರಣ ದಾಖಲಾಗಿದೆ. ಮಂಡ್ಯದಲ್ಲಿ ಎಫ್​ಐಆರ್​ ಆಗಿದ್ದು, ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಎಂದರು.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

12 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

12 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

12 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

12 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

12 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago