DK Shivakumar
ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ ಜಲಸಂಪನ್ಮೂಲ ಸಚಿವರಿಗೆ ಆಹ್ವಾನ ನೀಡಿದೆ.
ಅದರಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಇದೇ 23ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದೇ ತಿಂಗಳ 23ರಂದು ದೆಹಲಿಗೆ ಭೇಟಿ ನೀಡುವುದಾಗಿ ತಿಳಿಸಿದರು.
ದೆಹಲಿಯ ಭೇಟಿಯ ವೇಳೆ ಕೇಂದ್ರ ಜಲಶಕ್ತಿ ಸಚಿವರನ್ನು ಮತ್ತು ಅರಣ್ಯ ಸಚಿವರನ್ನು ಭೇಟಿ ಮಾಡಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು, ಮಹಾದಾಯಿ ನದಿಗೆ ಅಡ್ಡಲಾಗಿ ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಪರಿಸರ ಇಲಾಖೆಯ ಅನುಮತಿ ಹಾಗೂ ಇತರ ನೆರವುಗಳ ಬಗ್ಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ರಾಷ್ಟ್ರಮಟ್ಟದಲ್ಲಿ ನದಿ ಜೋಡಣೆಗೆ ಸಂಬಂಧಪಟ್ಟಂತೆ ಕೇಂದ್ರ ಸಚಿವರು ನೀರು ಅಭಿವೃದ್ಧಿ ಸಂಸ್ಥೆಯ ಮಹತ್ವದ ಸಭೆ ಕರೆದಿದ್ದಾರೆ. ತಾವು ಅದರಲ್ಲಿಯೂ ಭಾಗವಹಿಸುವುದಾಗಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಕೆಲ ವಿಚಾರಗಳನ್ನು ಚರ್ಚಿಸುವುದಾಗಿ ಹೇಳಿದ್ದಾರೆ. ಸಂಸದರ ಜೊತೆ ಕೇಂದ್ರ ಸಚಿವರನ್ನು ಭೇಟಿ ಮಾಡಬೇಕಿತ್ತು. ಆದರೆ ಸದ್ಯಕ್ಕೆ ಸಮಯ ಇಲ್ಲ. ಹಾಗಾಗಿ ತಾವೊಬ್ಬರೇ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ಹೇಳಿದರು.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…