cm siddaramaiah
ಬೆಂಗಳೂರು: ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕು ಎಂಬ ಹಲವು ವರ್ಷಗಳ ಬೇಡಿಕೆ ಶೀಘ್ರದಲ್ಲೇ ನೆರವೇರುವ ಎಲ್ಲಾ ಸಾಧ್ಯತೆಗಳು ಕಂಡುಬಂದಿವೆ.
ಸದ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಿಎಂ ಬಳಿಯೇ ಇದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ನಾಳೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಭೆ ಕರೆದಿದೆ.
ಇದನ್ನೂ ಓದಿ: ರಂಗೇರಿದ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಮೊದಲು ಸಿಡಿಮದ್ದು ತಾಲೀಮು
ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಗೆ ಅಗತ್ಯ ದಾಖಲೆಗಳನ್ನು ತರುವಂತೆ ನಾಲ್ಕು ಇಲಾಖೆಗಳ ಪತ್ರದ ಮುಖಾಂತರ ಸೂಚನೆ ನೀಡಲಾಗಿದೆ.
ಸೂಚನಾ ಪತ್ರದಲ್ಲಿ 2 ವಿಚಾರಗಳ ಬಗ್ಗೆ ಚರ್ಚೆ ನಡೆದಿದ್ದು, ಮೊದಲಿಗೆ ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆಗೊಳಿಸುವ ವಿಚಾರಗಳ ಬಗ್ಗೆ ಕೆಲ ಜಿಲ್ಲೆಗಳಲ್ಲಿ ಉಲ್ಲೇಖ ಮಾಡಲಾಗಿದೆ.
ಈ ಮೂಲಕ ಮತ್ತೊಂದು ರಾಜಕೀಯ ಗುದ್ದಾಟಕ್ಕೆ ವೇದಿಕೆ ಸಿದ್ಧ ಮಾಡಿದ್ರಾ ಸಿಎಂ ಸಿದ್ದರಾಮಯ್ಯ ಎನ್ನುವ ಪ್ರಶ್ನೆಯೂ ಹುಟ್ಟಿಕೊಂಡಿದೆ.
ಇನ್ನು ರಾಜ್ಯ ಸರ್ಕಾರ ಕಳೆದ 2023ರಲ್ಲೇ ಕ್ಯಾಬಿನೆಟ್ ಸಭೆಯಲ್ಲಿ ಕುರುಬರನ್ನು ಎಸ್ಟಿಗೆ ಸೇರಿಸುವ ತೀರ್ಮಾನ ಕೈಗೊಂಡಿತ್ತು. ಅದರಂತೆ ಮೈಸೂರಿನ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಕುರುಬ ಸಮುದಾಯದ ಜನಾಂಗೀಯ ಅಧ್ಯಯನ ನಡೆಸಿದ ವರದಿಯನ್ನು ಕಳುಹಿಸಲಾಗಿತ್ತು. ಇದೀಗ ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…