ರಾಜ್ಯ

ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ಇನ್ನಿಲ್ಲ

ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅನುವಾದಕ, ವಿಮರ್ಶಕ, ಕವಿ ಪ್ರೊ. ಅಮೃತ ಸೋಮೇಶ್ವರ ಅವರು ಇಂದು ( ಜನವರಿ 6 ) ಸೋಮೇಶ್ವರದಲ್ಲಿನ ತಮ್ಮ ಸ್ವಗೃಹ ʼಒಲುಮೆʼಯಲ್ಲಿ ನಿಧನ ಹೊಂದಿದ್ದಾರೆ.

ಸಮಾಜಮುಖಿ ಚಿಂತನೆಯುಳ್ಳ ಸಾಹಿತಿಯಾಗಿದ್ದ ಅಮೃತ ಸೋಮೇಶ್ವರ ಅವರು 1935ರ ಸೆಪ್ಟೆಂಬರ್‌ 27ರಂದು ಜನಿಸಿದ್ದರು. ಸೋಮೇಶ್ವರದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ತಮ್ಮ ಬಾಲ್ಯವನ್ನು ಮುಂಬೈನಲ್ಲಿ ಕಳೆದರು. ಬಳಿಕ ಐದು ವರ್ಷ ವಯಸ್ಸಿನವರಿದ್ದಾಗ ಊರಿಗೆ ಮರಳಿದ ಇವರು ಐದನೇ ತರಗತಿವರೆಗೆ ಕೋಟೆಕಾರಿನಲ್ಲಿರುವ ಸ್ಟೆಲಾ ಮೇರೀಸ್‌ ಪ್ರಾಥಮಿಕ ಶಾಲೆಯಲ್ಲಿ ಐದನೇ ತರಗತಿವರೆಗೂ ವ್ಯಾಸಂಗ ಮಾಡಿದರು. \

ಬಳಿಕ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಆರನೇ ತರಗತಿ ಕಲಿಕೆಯನ್ನು ಮುಂದುವರಿಸಿದ ಅಮೃತ ಸೋಮೇಶ್ವರ 1954ರಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದರು. ಸಾಹಿತ್ಯದಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದ ಅಮೃತ ಸೋಮೇಶ್ವರ ಅವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಇದರ ಜತೆಗೆ ಯಕ್ಷಗಾನ ಪ್ರಸಂಗಗಳನ್ನೂ ಸಹ ರಚಿಸಿರುವ ಇವರು ಅನೇಕ ಧ್ವನಿಸುರುಳಿಗಳಿಗೆ ಸಾಹಿತ್ಯ ಬರೆದಿದ್ದಾರೆ. ಅಮೃತ ಸೋಮೇಶ್ವರ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. 

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

7 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

11 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

11 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

11 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

11 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

11 hours ago