ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅನುವಾದಕ, ವಿಮರ್ಶಕ, ಕವಿ ಪ್ರೊ. ಅಮೃತ ಸೋಮೇಶ್ವರ ಅವರು ಇಂದು ( ಜನವರಿ 6 ) ಸೋಮೇಶ್ವರದಲ್ಲಿನ ತಮ್ಮ ಸ್ವಗೃಹ ʼಒಲುಮೆʼಯಲ್ಲಿ ನಿಧನ ಹೊಂದಿದ್ದಾರೆ.
ಸಮಾಜಮುಖಿ ಚಿಂತನೆಯುಳ್ಳ ಸಾಹಿತಿಯಾಗಿದ್ದ ಅಮೃತ ಸೋಮೇಶ್ವರ ಅವರು 1935ರ ಸೆಪ್ಟೆಂಬರ್ 27ರಂದು ಜನಿಸಿದ್ದರು. ಸೋಮೇಶ್ವರದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ತಮ್ಮ ಬಾಲ್ಯವನ್ನು ಮುಂಬೈನಲ್ಲಿ ಕಳೆದರು. ಬಳಿಕ ಐದು ವರ್ಷ ವಯಸ್ಸಿನವರಿದ್ದಾಗ ಊರಿಗೆ ಮರಳಿದ ಇವರು ಐದನೇ ತರಗತಿವರೆಗೆ ಕೋಟೆಕಾರಿನಲ್ಲಿರುವ ಸ್ಟೆಲಾ ಮೇರೀಸ್ ಪ್ರಾಥಮಿಕ ಶಾಲೆಯಲ್ಲಿ ಐದನೇ ತರಗತಿವರೆಗೂ ವ್ಯಾಸಂಗ ಮಾಡಿದರು. \
ಬಳಿಕ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಆರನೇ ತರಗತಿ ಕಲಿಕೆಯನ್ನು ಮುಂದುವರಿಸಿದ ಅಮೃತ ಸೋಮೇಶ್ವರ 1954ರಲ್ಲಿ ಎಸ್ಎಸ್ಎಲ್ಸಿ ಉತ್ತೀರ್ಣರಾದರು. ಸಾಹಿತ್ಯದಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದ ಅಮೃತ ಸೋಮೇಶ್ವರ ಅವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಇದರ ಜತೆಗೆ ಯಕ್ಷಗಾನ ಪ್ರಸಂಗಗಳನ್ನೂ ಸಹ ರಚಿಸಿರುವ ಇವರು ಅನೇಕ ಧ್ವನಿಸುರುಳಿಗಳಿಗೆ ಸಾಹಿತ್ಯ ಬರೆದಿದ್ದಾರೆ. ಅಮೃತ ಸೋಮೇಶ್ವರ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…