ರಾಜ್ಯ

ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ಇನ್ನಿಲ್ಲ

ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅನುವಾದಕ, ವಿಮರ್ಶಕ, ಕವಿ ಪ್ರೊ. ಅಮೃತ ಸೋಮೇಶ್ವರ ಅವರು ಇಂದು ( ಜನವರಿ 6 ) ಸೋಮೇಶ್ವರದಲ್ಲಿನ ತಮ್ಮ ಸ್ವಗೃಹ ʼಒಲುಮೆʼಯಲ್ಲಿ ನಿಧನ ಹೊಂದಿದ್ದಾರೆ.

ಸಮಾಜಮುಖಿ ಚಿಂತನೆಯುಳ್ಳ ಸಾಹಿತಿಯಾಗಿದ್ದ ಅಮೃತ ಸೋಮೇಶ್ವರ ಅವರು 1935ರ ಸೆಪ್ಟೆಂಬರ್‌ 27ರಂದು ಜನಿಸಿದ್ದರು. ಸೋಮೇಶ್ವರದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ತಮ್ಮ ಬಾಲ್ಯವನ್ನು ಮುಂಬೈನಲ್ಲಿ ಕಳೆದರು. ಬಳಿಕ ಐದು ವರ್ಷ ವಯಸ್ಸಿನವರಿದ್ದಾಗ ಊರಿಗೆ ಮರಳಿದ ಇವರು ಐದನೇ ತರಗತಿವರೆಗೆ ಕೋಟೆಕಾರಿನಲ್ಲಿರುವ ಸ್ಟೆಲಾ ಮೇರೀಸ್‌ ಪ್ರಾಥಮಿಕ ಶಾಲೆಯಲ್ಲಿ ಐದನೇ ತರಗತಿವರೆಗೂ ವ್ಯಾಸಂಗ ಮಾಡಿದರು. \

ಬಳಿಕ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಆರನೇ ತರಗತಿ ಕಲಿಕೆಯನ್ನು ಮುಂದುವರಿಸಿದ ಅಮೃತ ಸೋಮೇಶ್ವರ 1954ರಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದರು. ಸಾಹಿತ್ಯದಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದ ಅಮೃತ ಸೋಮೇಶ್ವರ ಅವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಇದರ ಜತೆಗೆ ಯಕ್ಷಗಾನ ಪ್ರಸಂಗಗಳನ್ನೂ ಸಹ ರಚಿಸಿರುವ ಇವರು ಅನೇಕ ಧ್ವನಿಸುರುಳಿಗಳಿಗೆ ಸಾಹಿತ್ಯ ಬರೆದಿದ್ದಾರೆ. ಅಮೃತ ಸೋಮೇಶ್ವರ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. 

andolana

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

2 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

10 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

20 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago