ಬೆಂಗಳೂರು: ರಾಜೀವ್ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚನೆ ನೀಡಿದರು.
ಗುರುವಾರ ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಿಎಂ, ನಿಮ್ಹಾನ್ಸ್ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ಎಂದು ಸೂಚಿಸಿದರು.
ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ ರೂ.400 ಕೋಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಅನುದಾನ ಒದಗಿಸಲಾಗಿದೆ. ಈ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಎಂದು ನಿರ್ದೇಶನ ನೀಡಿದರು.
2024-25 ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ರೂ.4331 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ ರೂ.3099 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ರೂ.3005 ಕೋಟಿ ವೆಚ್ಚ ಮಾಡಲಾಗಿದ್ದು, ಬಿಡುಗಡೆ ಮೊತ್ತಕ್ಕೆ ಶೇ. 96.97 ಪ್ರಗತಿ ಸಾಧಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಸಭೆಯ ಇತರೆ ಮುಖ್ಯಾಂಶಗಳು…
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…