ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶ ಕಲ್ಪಿಸುವ ‘ಇವ ನಮ್ಮವ ಇವ ನಮ್ಮವ’ ಎಂಬ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ರಾಜ್ಯದಲ್ಲಿ ಮರ್ಯಾದೆ ಹೆಸರಿನಲ್ಲಿ ಹತ್ಯೆ ಮತ್ತು ಹಲ್ಲೆಗಳನ್ನು ತಡೆಗಟ್ಟಲು ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆಯ ಹಾಗೂ ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧಕ (ಇವ ನಮ್ಮವ ಇವ ನಮ್ಮವ) ೨೦೨೬ನ್ನು ವಿಧಾನಸಭೆಯಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಕಾನೂನು ಸಚಿವರ ಪರವಾಗಿ ಮಂಡಿಸಿದರು.
ಈ ಕಾಯ್ದೆಯಲ್ಲಿ ಮರ್ಯಾದೆ ಹೆಸರಿನಲ್ಲಿ ಹತ್ಯೆಯಾದರೆ ಭಾರತೀಯ ನ್ಯಾಯ ಸಂಹಿತೆ ಅಡಿ ವಿಧಿಸಲಾದ ದಂಡನೆಗೆ ಬಾಧಕವಾಗದಂತೆ ಮರ್ಯಾದೆ ಹೆಸರಿನಲ್ಲಿ ದಂಪತಿ ಅಥವಾ ಅವರಲ್ಲಿ ಯಾರೊಬ್ಬರನ್ನೂ ಅಥವಾ ಯಾರೇ ವ್ಯಕ್ತಿಯನ್ನು ಯಾವುದೇ ರೀತಿಯ ಮೂಲಕ ಅವರ ಸಾವಿಗೆ ಕಾರಣರಾದ ಅಥವಾ ಸಾವಿಗೆ ಕಾರಣವಾಗುವ ಯಾವುದೇ ಅಂತಹ ಕೃತ್ಯವನ್ನು ಎಸಗಿದ ಯಾರೇ ವ್ಯಕ್ತಿಯು ಕನಿಷ್ಠ ಐದು ವರ್ಷಗಳ ಅವಧಿಯ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.
ಮರ್ಯಾದೆ ಹೆಸರಿನಲ್ಲಿ ದಂಪತಿ ಅಥವಾ ಅವರಲ್ಲಿ ಯಾರೊಬ್ಬರಿಗೂ ತೀವ್ರ ಗಾಯಗೊಳ್ಳಲು ಕಾರಣರಾದ ಯಾರೇ ವ್ಯಕ್ತಿಗೆ ಮೂರು ವರ್ಷಗಳಿಗೆ ಕಡಿಮೆ ಇಲ್ಲದ ಅವಧಿಯ ಜೈಲು ಶಿಕ್ಷೆ ಮತ್ತು ೩ ಲಕ್ಷ ರೂ.ಗಳವರೆಗೆ ಜುಲ್ಮಾನೆಯನ್ನು ವಿಧಿಸಲು ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಮರ್ಯಾದೆ ಹೆಸರಿನಲ್ಲಿ ದಂಪತಿ ಅಥವಾ ಅವರಲ್ಲಿ ಯಾರೊಬ್ಬರಿಗೂ ಸಣ್ಣ ಗಾಯವಾಗಲು ಕಾರಣರಾದ ಯಾರೇ ವ್ಯಕ್ತಿಗೆ ೨ ವರ್ಷಗಳಿಗೆ ಕಡಿಮೆ ಇಲ್ಲದೆ ಜೈಲು ಶಿಕ್ಷೆ ಮತ್ತು ೨ ಲಕ್ಷ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…