ರಾಜ್ಯ

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶ ಕಲ್ಪಿಸುವ ‘ಇವ ನಮ್ಮವ ಇವ ನಮ್ಮವ’ ಎಂಬ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ರಾಜ್ಯದಲ್ಲಿ ಮರ್ಯಾದೆ ಹೆಸರಿನಲ್ಲಿ ಹತ್ಯೆ ಮತ್ತು ಹಲ್ಲೆಗಳನ್ನು ತಡೆಗಟ್ಟಲು ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆಯ ಹಾಗೂ ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧಕ (ಇವ ನಮ್ಮವ ಇವ ನಮ್ಮವ) ೨೦೨೬ನ್ನು ವಿಧಾನಸಭೆಯಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಕಾನೂನು ಸಚಿವರ ಪರವಾಗಿ ಮಂಡಿಸಿದರು.

ಈ ಕಾಯ್ದೆಯಲ್ಲಿ ಮರ್ಯಾದೆ ಹೆಸರಿನಲ್ಲಿ ಹತ್ಯೆಯಾದರೆ ಭಾರತೀಯ ನ್ಯಾಯ ಸಂಹಿತೆ ಅಡಿ ವಿಧಿಸಲಾದ ದಂಡನೆಗೆ ಬಾಧಕವಾಗದಂತೆ ಮರ್ಯಾದೆ ಹೆಸರಿನಲ್ಲಿ ದಂಪತಿ ಅಥವಾ ಅವರಲ್ಲಿ ಯಾರೊಬ್ಬರನ್ನೂ ಅಥವಾ ಯಾರೇ ವ್ಯಕ್ತಿಯನ್ನು ಯಾವುದೇ ರೀತಿಯ ಮೂಲಕ ಅವರ ಸಾವಿಗೆ ಕಾರಣರಾದ ಅಥವಾ ಸಾವಿಗೆ ಕಾರಣವಾಗುವ ಯಾವುದೇ ಅಂತಹ ಕೃತ್ಯವನ್ನು ಎಸಗಿದ ಯಾರೇ ವ್ಯಕ್ತಿಯು ಕನಿಷ್ಠ ಐದು ವರ್ಷಗಳ ಅವಧಿಯ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಮರ್ಯಾದೆ ಹೆಸರಿನಲ್ಲಿ ದಂಪತಿ ಅಥವಾ ಅವರಲ್ಲಿ ಯಾರೊಬ್ಬರಿಗೂ ತೀವ್ರ ಗಾಯಗೊಳ್ಳಲು ಕಾರಣರಾದ ಯಾರೇ ವ್ಯಕ್ತಿಗೆ ಮೂರು ವರ್ಷಗಳಿಗೆ ಕಡಿಮೆ ಇಲ್ಲದ ಅವಧಿಯ ಜೈಲು ಶಿಕ್ಷೆ ಮತ್ತು ೩ ಲಕ್ಷ ರೂ.ಗಳವರೆಗೆ ಜುಲ್ಮಾನೆಯನ್ನು ವಿಧಿಸಲು ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಮರ್ಯಾದೆ ಹೆಸರಿನಲ್ಲಿ ದಂಪತಿ ಅಥವಾ ಅವರಲ್ಲಿ ಯಾರೊಬ್ಬರಿಗೂ ಸಣ್ಣ ಗಾಯವಾಗಲು ಕಾರಣರಾದ ಯಾರೇ ವ್ಯಕ್ತಿಗೆ ೨ ವರ್ಷಗಳಿಗೆ ಕಡಿಮೆ ಇಲ್ಲದೆ ಜೈಲು ಶಿಕ್ಷೆ ಮತ್ತು ೨ ಲಕ್ಷ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

12 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

16 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

16 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

17 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

18 hours ago