ರಾಜ್ಯ

ವಿಧಾನಸೌಧ ಮುಂಬಾಗ ಪಾಕ್‌ಪರ ಘೋಷಣೆ ಪ್ರಕರಣ: ಮೂವರಿಗೆ ಜಾಮೀನು!

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಯ್ಯದ್‌ ನಾಸೀರ್‌ ಹುಸೇನ್‌ ಜಯಗಳಿಸಿದ ಬೆನ್ನಲ್ಲೇ ಸಂಭ್ರಮಿಸುವ ಭರದಲ್ಲಿ ಹುಸೇನ್‌ ಅಭಿಮಾನಿಗಳು ಪಾಕಿಸ್ತಾನ್‌ ಜಿಂದಾಬಾಜ್‌ ಎಂದು ಘೋಷಣೆ ಕೂಗಿದ್ದರು ಎಂದ ಆರೋಪಿಸಿ ಮೂವರನ್ನು ವಶಕ್ಕೆ ಪಡೆಯಲಾಗಿತ್ತು.

ಸದ್ಯ ಈ ಮೂವರಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್‌ ನಿವಾಸಿ ಡಿ.ಎಸ್‌ ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿ.ವಿಜೇತ್‌ ಪುರಸ್ಕರಿಸಿ ಷರತ್ತುಬದ್ಧ ಜಾಮೀನು ನೀಡಿದ್ದಾರೆ.

ಆರೋಪಿಗಳು ರೂ.1 ಲಕ್ಷ ಮೊತ್ತದ ಮುಚ್ಚಳಿಕೆ ನೀಡಬೇಕು, ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು, ಆರೋಪಿಗಳು ದೇಶ ಬಿಟ್ಟು ಹೋಗಬಾರದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಹಾಗೂ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂಬ ಷರತ್ತುಗಳನ್ನು ಕೋರ್ಟ್‌ ವಿಧಿಸಿದೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

10 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago