ರಾಜ್ಯ

ಆಸ್ತಿ ನೋಂದಣಿ ಶುಲ್ಕ ಪರಿಷ್ಕರಣೆ : ನಾಳೆಯಿಂದ ಜಾರಿ

ಬೆಂಗಳೂರು : ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ. ಇದು ಆಗಸ್ಟ್‌ 31 ರಿಂದ ಜಾರಿಗೆ ಬರಲಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ. 7.5,ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ. ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು (Rationalisation) ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು.

ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಲು ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್‌ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್‌ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‌ಎಂಎಸ್‌ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.

ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇಕಡ 2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.

ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

6 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

6 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

7 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

8 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

8 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

9 hours ago