ರಾಜ್ಯ

ಆಸ್ತಿ ನೋಂದಣಿ ಶುಲ್ಕ ಪರಿಷ್ಕರಣೆ : ನಾಳೆಯಿಂದ ಜಾರಿ

ಬೆಂಗಳೂರು : ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ. ಇದು ಆಗಸ್ಟ್‌ 31 ರಿಂದ ಜಾರಿಗೆ ಬರಲಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ. 7.5,ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ. ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು (Rationalisation) ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು.

ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಲು ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್‌ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್‌ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‌ಎಂಎಸ್‌ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.

ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇಕಡ 2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.

ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

37 mins ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

1 hour ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

2 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

8 hours ago