vidhan sowdha
ಬೆಂಗಳೂರು : ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ. ಇದು ಆಗಸ್ಟ್ 31 ರಿಂದ ಜಾರಿಗೆ ಬರಲಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ. 7.5,ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ. ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು (Rationalisation) ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು.
ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಲು ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್ಎಂಎಸ್ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.
ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇಕಡ 2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.
ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…