ಮೈಸೂರು: ಮುಡಾ ಹಗರಣ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹಿನ್ನೆಲೆ ರಾಜ್ಯಾದ್ಯಂತ ಸಿದ್ದರಾಮಯ್ಯ ಬೆಂಬಲಿಗರು, ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ.
ಈ ಹಿನ್ನೆಲೆ ಯಾವುದೇ ಕ್ಷಣದಲ್ಲಾದರೂ ಬೆಂಬಲಿಗರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುತ್ತದೆ. ನಿನ್ನೆಯು ಸಹ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಾಳೆಯು ಸಹ ರಾಜ್ಯಾಂದ್ಯಂತ ಪ್ರತಿಭಟನೆಗೆ ಸಜ್ಜಾಗುತ್ತಿರುವುದುದಾಗಿ ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂಬ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಪ್ರತಿಭಟನೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ಸಾಧ್ಯತೆ ಇರುವುದರಿಂದ ರಾಜ್ಯಾಂದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರು ಹಾಗೂ ಸಿಎಂ ತವರೂರು ಮೈಸೂರು ಸೇರಿದಂತೆ ಎಲ್ಲಾ ಜಿಲ್ಲೆಯಗಳಲ್ಲಿಯೂ ಪೊಲೀಸರು ಹೆಚ್ಚಿನ ಭದ್ರತೆ ವಹಿಸುವಂತೆ ಎಚ್ಚರಿಸಲಾಗಿದೆ. ಪ್ರತಿಭಟನೆಯ ಮಾಹಿತಿ ಪಡೆದು, ಯಾವುದೇ ರೀತಿಯಲ್ಲಿಯೂ ಶಾಂತಿಭಂಗವಾಗದಂತೆ ಎಚ್ಚರ ವಹಿಸುವಂತೆ ಎಲ್ಲಾ ಜಿಲ್ಲೆಗಳ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…
ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…
ಪಂಜುಗಂಗೊಳ್ಳಿ ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ…