ಮೈಸೂರು: ಮುಡಾ ಹಗರಣ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹಿನ್ನೆಲೆ ರಾಜ್ಯಾದ್ಯಂತ ಸಿದ್ದರಾಮಯ್ಯ ಬೆಂಬಲಿಗರು, ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ.
ಈ ಹಿನ್ನೆಲೆ ಯಾವುದೇ ಕ್ಷಣದಲ್ಲಾದರೂ ಬೆಂಬಲಿಗರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುತ್ತದೆ. ನಿನ್ನೆಯು ಸಹ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಾಳೆಯು ಸಹ ರಾಜ್ಯಾಂದ್ಯಂತ ಪ್ರತಿಭಟನೆಗೆ ಸಜ್ಜಾಗುತ್ತಿರುವುದುದಾಗಿ ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂಬ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಪ್ರತಿಭಟನೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ಸಾಧ್ಯತೆ ಇರುವುದರಿಂದ ರಾಜ್ಯಾಂದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರು ಹಾಗೂ ಸಿಎಂ ತವರೂರು ಮೈಸೂರು ಸೇರಿದಂತೆ ಎಲ್ಲಾ ಜಿಲ್ಲೆಯಗಳಲ್ಲಿಯೂ ಪೊಲೀಸರು ಹೆಚ್ಚಿನ ಭದ್ರತೆ ವಹಿಸುವಂತೆ ಎಚ್ಚರಿಸಲಾಗಿದೆ. ಪ್ರತಿಭಟನೆಯ ಮಾಹಿತಿ ಪಡೆದು, ಯಾವುದೇ ರೀತಿಯಲ್ಲಿಯೂ ಶಾಂತಿಭಂಗವಾಗದಂತೆ ಎಚ್ಚರ ವಹಿಸುವಂತೆ ಎಲ್ಲಾ ಜಿಲ್ಲೆಗಳ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…