ಮೈಸೂರು: ಮುಡಾ ಹಗರಣ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹಿನ್ನೆಲೆ ರಾಜ್ಯಾದ್ಯಂತ ಸಿದ್ದರಾಮಯ್ಯ ಬೆಂಬಲಿಗರು, ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ.
ಈ ಹಿನ್ನೆಲೆ ಯಾವುದೇ ಕ್ಷಣದಲ್ಲಾದರೂ ಬೆಂಬಲಿಗರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುತ್ತದೆ. ನಿನ್ನೆಯು ಸಹ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಾಳೆಯು ಸಹ ರಾಜ್ಯಾಂದ್ಯಂತ ಪ್ರತಿಭಟನೆಗೆ ಸಜ್ಜಾಗುತ್ತಿರುವುದುದಾಗಿ ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂಬ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಪ್ರತಿಭಟನೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ಸಾಧ್ಯತೆ ಇರುವುದರಿಂದ ರಾಜ್ಯಾಂದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರು ಹಾಗೂ ಸಿಎಂ ತವರೂರು ಮೈಸೂರು ಸೇರಿದಂತೆ ಎಲ್ಲಾ ಜಿಲ್ಲೆಯಗಳಲ್ಲಿಯೂ ಪೊಲೀಸರು ಹೆಚ್ಚಿನ ಭದ್ರತೆ ವಹಿಸುವಂತೆ ಎಚ್ಚರಿಸಲಾಗಿದೆ. ಪ್ರತಿಭಟನೆಯ ಮಾಹಿತಿ ಪಡೆದು, ಯಾವುದೇ ರೀತಿಯಲ್ಲಿಯೂ ಶಾಂತಿಭಂಗವಾಗದಂತೆ ಎಚ್ಚರ ವಹಿಸುವಂತೆ ಎಲ್ಲಾ ಜಿಲ್ಲೆಗಳ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…