ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರಿನ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಬ್ಧಾರಿ ನನ್ನ ಮೇಲಿದ್ದು ಅದಕ್ಕಾಗಿ ಹೆಚ್ಚಿನ ಆಧ್ಯತೆ ನೀಡುತ್ತೇನೆ ಎಂದು ಮೈಸೂರು – ಕೊಡಗು ನೋತನ ಸಂಸದರಾದ ಯದುವೀರ್ ತಿಳಿಸಿದ್ದಾರೆ.
ನೆನ್ನೆ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ನನಗೆ ಮತ ನೀಡಿದ ಎಲ್ಲಾ ಮತದಾರರಿಗೂ ಧನ್ಯವಾದಗಳು ಎಂದು ಹೇಳಿದರು.
ಸಾಂಸ್ಕೃತಿಕ ನಗರಿ ಮೈಸೂರಿನ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಬ್ಧಾರಿ ನನ್ನ ಮೇಲಿದೆ. ಅದಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತೇವೆ. ಇನ್ನು ಕೊಡಗಿನಲ್ಲಿ ಪರಿಸರ ಸಂರಕ್ಷಣೆ ಮಾಡುವ ಕೆಲಸ ತುಂಬಾ ಮುಖ್ಯವಾಗಿದೆ ಅದನ್ನು ಮಾಡುತ್ತೇವೆ ಎಂದರು.
ಬೆಲೆ ಏರಿಕೆಯಿಂದ ಜನರಿಗೆ ಸಂಕಷ್ಟ : ರಾಜ್ಯ ಸರ್ಕಾರ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದ ಯದುವೀರ್, ಕೇವಲ ಹಾಲಿನ ಧರ ಏರಿಕೆ ಮಾತ್ರವಲ್ಲದೆ ಎಲ್ಲಾ ವಸ್ತುಗಳ ಧರವನ್ನು ಏರಿಕೆ ಮಾಡಲಾಗುತ್ತಿದೆ. ಈ ಬಗ್ಗೆ ಈ ಹಿಂದೆಯೂ ವಿರೋಧ ವ್ಯಕ್ತಪಡಿಸಿದೇವೆ. ಬೆಲೆ ಏರಿಕೆಯಿಂದ ಬಡವರು ಹಾಗೂ ಮಧ್ಯಮವರ್ಗದ ಜನರಿಗೆ ತೊಂದರೆಯಾಗುತ್ತಿದೆ. ಬೆಲೆ ಏರಿಕೆ ಮಾಡದಂತೆ ಈಗಾಗಲೇ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರಾಜ್ಯ ಸರ್ಕಾರ ಅದನ್ನು ಪರಿಗಣಿಸಿ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…