ರಾಜ್ಯ

ಮೈಸೂರು ಪರಂಪರೆ ರಕ್ಷಣೆ ನಮ್ಮ ಆಧ್ಯತೆ : ಸಂಸದ ಯದುವೀರ್‌

ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರಿನ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಬ್ಧಾರಿ ನನ್ನ ಮೇಲಿದ್ದು ಅದಕ್ಕಾಗಿ ಹೆಚ್ಚಿನ ಆಧ್ಯತೆ ನೀಡುತ್ತೇನೆ ಎಂದು ಮೈಸೂರು – ಕೊಡಗು ನೋತನ ಸಂಸದರಾದ ಯದುವೀರ್‌ ತಿಳಿಸಿದ್ದಾರೆ.

ನೆನ್ನೆ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ನನಗೆ ಮತ ನೀಡಿದ ಎಲ್ಲಾ ಮತದಾರರಿಗೂ ಧನ್ಯವಾದಗಳು ಎಂದು ಹೇಳಿದರು.

ಸಾಂಸ್ಕೃತಿಕ ನಗರಿ ಮೈಸೂರಿನ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಬ್ಧಾರಿ ನನ್ನ ಮೇಲಿದೆ. ಅದಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತೇವೆ. ಇನ್ನು ಕೊಡಗಿನಲ್ಲಿ ಪರಿಸರ ಸಂರಕ್ಷಣೆ ಮಾಡುವ ಕೆಲಸ ತುಂಬಾ ಮುಖ್ಯವಾಗಿದೆ ಅದನ್ನು ಮಾಡುತ್ತೇವೆ ಎಂದರು.

ಬೆಲೆ ಏರಿಕೆಯಿಂದ ಜನರಿಗೆ ಸಂಕಷ್ಟ : ರಾಜ್ಯ ಸರ್ಕಾರ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದ ಯದುವೀರ್‌, ಕೇವಲ ಹಾಲಿನ ಧರ ಏರಿಕೆ ಮಾತ್ರವಲ್ಲದೆ ಎಲ್ಲಾ ವಸ್ತುಗಳ ಧರವನ್ನು ಏರಿಕೆ ಮಾಡಲಾಗುತ್ತಿದೆ. ಈ ಬಗ್ಗೆ ಈ ಹಿಂದೆಯೂ ವಿರೋಧ ವ್ಯಕ್ತಪಡಿಸಿದೇವೆ. ಬೆಲೆ ಏರಿಕೆಯಿಂದ ಬಡವರು ಹಾಗೂ ಮಧ್ಯಮವರ್ಗದ ಜನರಿಗೆ ತೊಂದರೆಯಾಗುತ್ತಿದೆ. ಬೆಲೆ ಏರಿಕೆ ಮಾಡದಂತೆ ಈಗಾಗಲೇ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರಾಜ್ಯ ಸರ್ಕಾರ ಅದನ್ನು ಪರಿಗಣಿಸಿ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

44 mins ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

51 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

56 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

1 hour ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

1 hour ago