ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರಿನ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಬ್ಧಾರಿ ನನ್ನ ಮೇಲಿದ್ದು ಅದಕ್ಕಾಗಿ ಹೆಚ್ಚಿನ ಆಧ್ಯತೆ ನೀಡುತ್ತೇನೆ ಎಂದು ಮೈಸೂರು – ಕೊಡಗು ನೋತನ ಸಂಸದರಾದ ಯದುವೀರ್ ತಿಳಿಸಿದ್ದಾರೆ.
ನೆನ್ನೆ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ನನಗೆ ಮತ ನೀಡಿದ ಎಲ್ಲಾ ಮತದಾರರಿಗೂ ಧನ್ಯವಾದಗಳು ಎಂದು ಹೇಳಿದರು.
ಸಾಂಸ್ಕೃತಿಕ ನಗರಿ ಮೈಸೂರಿನ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಬ್ಧಾರಿ ನನ್ನ ಮೇಲಿದೆ. ಅದಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತೇವೆ. ಇನ್ನು ಕೊಡಗಿನಲ್ಲಿ ಪರಿಸರ ಸಂರಕ್ಷಣೆ ಮಾಡುವ ಕೆಲಸ ತುಂಬಾ ಮುಖ್ಯವಾಗಿದೆ ಅದನ್ನು ಮಾಡುತ್ತೇವೆ ಎಂದರು.
ಬೆಲೆ ಏರಿಕೆಯಿಂದ ಜನರಿಗೆ ಸಂಕಷ್ಟ : ರಾಜ್ಯ ಸರ್ಕಾರ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದ ಯದುವೀರ್, ಕೇವಲ ಹಾಲಿನ ಧರ ಏರಿಕೆ ಮಾತ್ರವಲ್ಲದೆ ಎಲ್ಲಾ ವಸ್ತುಗಳ ಧರವನ್ನು ಏರಿಕೆ ಮಾಡಲಾಗುತ್ತಿದೆ. ಈ ಬಗ್ಗೆ ಈ ಹಿಂದೆಯೂ ವಿರೋಧ ವ್ಯಕ್ತಪಡಿಸಿದೇವೆ. ಬೆಲೆ ಏರಿಕೆಯಿಂದ ಬಡವರು ಹಾಗೂ ಮಧ್ಯಮವರ್ಗದ ಜನರಿಗೆ ತೊಂದರೆಯಾಗುತ್ತಿದೆ. ಬೆಲೆ ಏರಿಕೆ ಮಾಡದಂತೆ ಈಗಾಗಲೇ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರಾಜ್ಯ ಸರ್ಕಾರ ಅದನ್ನು ಪರಿಗಣಿಸಿ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…