ರಾಜ್ಯ

ಸಂವಿಧಾನ, ಪ್ರಜಾಪ್ರಭುತ್ವ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದ್ದು, ಎಷ್ಟೇ ಕಷ್ಟಗಳು ಎದುರಾಗುತ್ತಿದ್ದರೂ ಇದಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮದು ಬಹು ಸಂಸ್ಕೃತಿಯಲ್ಲಿ ಏಕತೆಯ ರಾಷ್ಟ್ರ. ಬಸವಣ್ಣ ಅವರ ಅನುಭವ ಮಂಟಪದಲ್ಲೂ ಪ್ರಜಾಪ್ರಭುತ್ವಕ್ಕೆ ಒತ್ತು ನೀಡಲಾಗಿತ್ತು ಎಂದರು.

ಇತ್ತೀಚೆಗೆ ಮತಗಳ್ಳತನ ನಡೆಯುತ್ತಿದೆ. ನನ್ನ ಮತ ನನ್ನ ಹಕ್ಕಿಗಾಗಿ ಹೋರಾಟ ಮಾಡಬೇಕು ಎಂಬ ಪರಿಸ್ಥಿತಿ ಎದುರಾಗಿದೆ. ಸಂವಿಧಾನ, ಪ್ರಜಾಪ್ರಭುತ್ವ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಅನಿವಾರ್ಯವಾಗಿದೆ ಎಂದರು.

ಇದನ್ನು ಓದಿ: ಮೈಸೂರು: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್‌ ರ್ಯಾಲಿ

ಸಂವಿಧಾನದಲ್ಲಿ ಯಾವ ಜಾತಿ ಧರ್ಮಕ್ಕೂ ಮೇಲು-ಕೀಳು ಎಂಬ ತಾರತಮ್ಯ ಇಲ್ಲ. ಜಾತಿ, ಧರ್ಮ ಹಾಗೂ ಲಿಂಗ ಬೇಧವಿಲ್ಲದೇ ಎಲ್ಲರಿಗೂ ಪ್ರಜಾಪ್ರಭುತ್ವದಲ್ಲಿ ಸಮಾನ ಅವಕಾಶಗಳಿವೆ. ಸಾಮಾಜಿಕ ಅಸಮಾನತೆ ನಿವಾರಣೆಯಾಗಬೇಕು. ಪ್ರತಿಯೊಬ್ಬರಿಗೂ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ದೊರೆಯಬೇಕು. ಜಾತಿಬೇಧ ಮಾಡಬಾರದು. ಧರ್ಮ ಸಹಿಷ್ಣುತೆ ಇರಬೇಕೆಂದು ಹೇಳಿದರು.

ವಿರೋಧ ಪಕ್ಷಗಳಿಗೆ ರಾಜಕೀಯ ಮಾಡಲು ಬೇರೆ ವಿಷಯಗಳೇ ಇಲ್ಲ. ಧರ್ಮದ ಹೆಸರಿನಲ್ಲೇ ರಾಜಕೀಯ ಮಾಡುತ್ತಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟಿಸಬಾರದೆಂದು ವಿರೋಧ ವ್ಯಕ್ತಪಡಿಸಲಾಗಿದೆ. ನಾವು ಯಾವ ವ್ಯವಸ್ಥೆಯಲ್ಲಿದ್ದೇವೆ ಎಂದೇ ಅರ್ಥವಾಗುತ್ತಿಲ್ಲ. ಸಂವಿಧಾನ ಧರ್ಮ ತಾರತಮ್ಯಕ್ಕೆ ಅವಕಾಶ ನೀಡುವುದಿಲ್ಲ. ಸ್ವಾತಂತ್ರ್ಯ ಬಂದು ಇಷ್ಟೂ ವರ್ಷಗಳಾದರೂ ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಮಾಜಿ ಸಂಸದನೊಬ್ಬ ಸಂವಿಧಾನ ಓದದೆ ಮೂರ್ಖನಂತೆ ನಡೆದುಕೊಳ್ಳುತ್ತಾನೆ ಎಂದು ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

7 mins ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

44 mins ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

1 hour ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

2 hours ago

ಆಂದೋಲನ ವಿಶೇಷ ; ಸೋನಂ ವಾಂಗ್ಚುಕ್ ದಿಢೀರ್ ಬಿಡುಗಡೆ ‌

• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…

4 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ

ಮಹಾದೇಶ್‌ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…

4 hours ago