ರಾಜ್ಯ

ಸಂವಿಧಾನ, ಪ್ರಜಾಪ್ರಭುತ್ವ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದ್ದು, ಎಷ್ಟೇ ಕಷ್ಟಗಳು ಎದುರಾಗುತ್ತಿದ್ದರೂ ಇದಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮದು ಬಹು ಸಂಸ್ಕೃತಿಯಲ್ಲಿ ಏಕತೆಯ ರಾಷ್ಟ್ರ. ಬಸವಣ್ಣ ಅವರ ಅನುಭವ ಮಂಟಪದಲ್ಲೂ ಪ್ರಜಾಪ್ರಭುತ್ವಕ್ಕೆ ಒತ್ತು ನೀಡಲಾಗಿತ್ತು ಎಂದರು.

ಇತ್ತೀಚೆಗೆ ಮತಗಳ್ಳತನ ನಡೆಯುತ್ತಿದೆ. ನನ್ನ ಮತ ನನ್ನ ಹಕ್ಕಿಗಾಗಿ ಹೋರಾಟ ಮಾಡಬೇಕು ಎಂಬ ಪರಿಸ್ಥಿತಿ ಎದುರಾಗಿದೆ. ಸಂವಿಧಾನ, ಪ್ರಜಾಪ್ರಭುತ್ವ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಅನಿವಾರ್ಯವಾಗಿದೆ ಎಂದರು.

ಇದನ್ನು ಓದಿ: ಮೈಸೂರು: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್‌ ರ್ಯಾಲಿ

ಸಂವಿಧಾನದಲ್ಲಿ ಯಾವ ಜಾತಿ ಧರ್ಮಕ್ಕೂ ಮೇಲು-ಕೀಳು ಎಂಬ ತಾರತಮ್ಯ ಇಲ್ಲ. ಜಾತಿ, ಧರ್ಮ ಹಾಗೂ ಲಿಂಗ ಬೇಧವಿಲ್ಲದೇ ಎಲ್ಲರಿಗೂ ಪ್ರಜಾಪ್ರಭುತ್ವದಲ್ಲಿ ಸಮಾನ ಅವಕಾಶಗಳಿವೆ. ಸಾಮಾಜಿಕ ಅಸಮಾನತೆ ನಿವಾರಣೆಯಾಗಬೇಕು. ಪ್ರತಿಯೊಬ್ಬರಿಗೂ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ದೊರೆಯಬೇಕು. ಜಾತಿಬೇಧ ಮಾಡಬಾರದು. ಧರ್ಮ ಸಹಿಷ್ಣುತೆ ಇರಬೇಕೆಂದು ಹೇಳಿದರು.

ವಿರೋಧ ಪಕ್ಷಗಳಿಗೆ ರಾಜಕೀಯ ಮಾಡಲು ಬೇರೆ ವಿಷಯಗಳೇ ಇಲ್ಲ. ಧರ್ಮದ ಹೆಸರಿನಲ್ಲೇ ರಾಜಕೀಯ ಮಾಡುತ್ತಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟಿಸಬಾರದೆಂದು ವಿರೋಧ ವ್ಯಕ್ತಪಡಿಸಲಾಗಿದೆ. ನಾವು ಯಾವ ವ್ಯವಸ್ಥೆಯಲ್ಲಿದ್ದೇವೆ ಎಂದೇ ಅರ್ಥವಾಗುತ್ತಿಲ್ಲ. ಸಂವಿಧಾನ ಧರ್ಮ ತಾರತಮ್ಯಕ್ಕೆ ಅವಕಾಶ ನೀಡುವುದಿಲ್ಲ. ಸ್ವಾತಂತ್ರ್ಯ ಬಂದು ಇಷ್ಟೂ ವರ್ಷಗಳಾದರೂ ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಮಾಜಿ ಸಂಸದನೊಬ್ಬ ಸಂವಿಧಾನ ಓದದೆ ಮೂರ್ಖನಂತೆ ನಡೆದುಕೊಳ್ಳುತ್ತಾನೆ ಎಂದು ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

2 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

2 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

3 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

3 hours ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

3 hours ago