ರಾಜ್ಯ

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ : ಡಿಸಿಎಂ ಡಿಕೆಶಿ

ಬೆಂಗಳೂರು : ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್ ಬೆಲೆ  ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಏಪ್ರಿಲ್‌ 17ರಂದು ರಾಜ್ಯ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಇಂದು(ಏ.10) ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯವರು ಈಗಾಗಲೇ ʼಜನಾಕ್ರೋಶ ಯಾತ್ರೆʼ ನಡೆಸುತ್ತಿದ್ದಾರೆ. ಅದು ಅವರದ್ದೇ ಕೇಂದ್ರ ಸರ್ಕಾರದ ವಿರುದ್ಧ ಅವರು ನಡೆಸುತ್ತಿರುವ ಯಾತ್ರೆ. ನಮ್ಮ ಸರ್ಕಾರದ ವಿರುದ್ಧ ಪ್ರತಿಭಟಿಸಲು ಅವರಿಗೆ ಏನೂ ವಿಷಯವಿಲ್ಲ. ನಾವು ಜನರು ಬದುಕು ಕಟ್ಟಿಕೊಳ್ಳಲೆಂದು, ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆಂದು 52 ಸಾವಿರ ಕೋಟಿ ಬಜೆಟ್‌ನಲ್ಲಿಟ್ಟು ಜನರಿಗೆ ಪಂಚ ಗ್ಯಾರಂಟಿಗಳ ಮೂಲಕ ಸಹಾಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಬಿಜೆಪಿಗರ ಆಂತರಿಕ ಕಚ್ಚಾಟ ಹಾಗೂ ಕೇಂದ್ರ ಸರ್ಕಾರದ ನೀತಿಗಳು ಎಲ್ಲಾ ವರ್ಗದ ಜನರಿಗೂ ಹೊಡೆತ ನೀಡಿದೆ. ಯಾವ ವರ್ಗವೂ ಇದರ ಹೊರತಾಗಿಲ್ಲ. ಈ ಗುಣಗಾನಗಳನ್ನು ಸಾಮಾನ್ಯ ಜನರ ಬಳಿಯೇ ಕೇಳಬೇಕು ಎಂದು ವ್ಯಂಗ್ಯವಾಡಿದರು.

ನಿನ್ನೆ ಕಚ್ಛಾ ತೈಲದ ಬೆಲೆ 4.3ರಷ್ಟು ಇಳಿಕೆಯಾಗಿದೆ. ಆದರೂ ಕೇಂದ್ರ ಸರ್ಕಾರ ಯಾಕೆ ಇಂಧನ ಬೆಲೆ ಇಳಿಸಿಲ್ಲ? ಪೆಟ್ರೋಲ್‌ ಮೂಲ ಬೆಲೆ ಪ್ರತಿ ಲೀಟರ್‌ಗೆ 42.60 ರೂ. ಇದೆ. ತೆರಿಗೆ ಹೆಚ್ಚಿಸಿ 103 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಒಂದು ಲೀಟರ್‌ಗೆ 60 ರೂ. ಲಾಭ ಕೇಂದ್ರಕ್ಕೆ ಸಿಗುತ್ತಿದೆ. ಡೀಸೆಲ್‌ ಬೆಲೆ 92 ರೂ. ಇದೆ. 43 ರೂ. ಲಾಭ ಅವರಿಗೆ ಸಿಗುತ್ತಿದೆ. ತೈಲ ಬೆಲೆಯ ಮೇಲೆ 60% ತೆರಿಗೆ ಹಾಕುತ್ತಿದ್ದಾರೆ. ‌43 ಲಕ್ಷ ಕೋಟಿ ರೂ. ಅವರು ಈ ಮೂಲಕ ಲೂಟಿ ಹೊಡೆಯುತ್ತಿದ್ದಾರೆ. ತಮ್ಮ ಯಾತ್ರೆ ಕೇಂದ್ರ ಸರ್ಕಾರದ ವಿರುದ್ಧದ ಯಾತ್ರೆ ಎಂದು ರಾಜ್ಯ ಬಿಜೆಪಿಯವರು ಬೋರ್ಡ್‌ ಹಾಕಿಕೊಂಡು ಯಾತ್ರೆ ಮಾಡಬೇಕು ಎಂದರು.

ನಾವು ಹಾಲಿನ ಬೆಲೆ ಏರಿಸಿದ್ದು ರೈತರ ಬದುಕು ಹಸನುಗೊಳಿಸಲು. ಕೇಂದ್ರದಿಂದ ಬೂಸಾ, ಇಂಡಿ ಬೆಲೆ ಏಕೆ ಕಡಿಮೆ ಮಾಡಿಸಲು ಆಗಿಲ್ಲ? ಕೇಂದ್ರದಿಂದಲೇ ಎಲ್ಲಾ ಬೆಲೆಯನ್ನು ಹೆಚ್ಚಿಸಿ, ಈಗ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ನಡೆಸಿದರೆ ಅರ್ಥವಿದೆಯೇ? ಎಂದು ಪ್ರಶ್ನಿಸಿದರು.

ನಮ್ಮಲ್ಲಿ ಹಾಲು ಪ್ರತಿ ಲೀಟರ್‌ಗೆ 42 ರೂ. ಇದೆ. ಆದರೆ, ಕೇರಳದಲ್ಲಿ 52, ಮಹಾರಾಷ್ಟ್ರ 52, ತೆಲಂಗಾಣ 58, ಅಸ್ಸಾಂ 60, ಹರಿಯಾಣ 56, ಮಧ್ಯಪ್ರದೇಶ 52, ಪಂಜಾಬ್‌ 56, ಉತ್ತರ ಪ್ರದೇಶ 56, ಗುಜರಾತ್ 53‌ ರೂ. ಇದೆ. ನಾವು ರೈತರ ಉಳಿಸಲಿಕ್ಕಾಗಿ ಹಾಲಿನ ಬೆಲೆ ಏರಿಸುವ ತೀರ್ಮಾನ ಕೈಗೊಂಡಿದ್ದೇವೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

6 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

9 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

11 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

11 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

11 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

11 hours ago