ರಾಜ್ಯ

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ : ಡಿಸಿಎಂ ಡಿಕೆಶಿ

ಬೆಂಗಳೂರು : ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್ ಬೆಲೆ  ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಏಪ್ರಿಲ್‌ 17ರಂದು ರಾಜ್ಯ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಇಂದು(ಏ.10) ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯವರು ಈಗಾಗಲೇ ʼಜನಾಕ್ರೋಶ ಯಾತ್ರೆʼ ನಡೆಸುತ್ತಿದ್ದಾರೆ. ಅದು ಅವರದ್ದೇ ಕೇಂದ್ರ ಸರ್ಕಾರದ ವಿರುದ್ಧ ಅವರು ನಡೆಸುತ್ತಿರುವ ಯಾತ್ರೆ. ನಮ್ಮ ಸರ್ಕಾರದ ವಿರುದ್ಧ ಪ್ರತಿಭಟಿಸಲು ಅವರಿಗೆ ಏನೂ ವಿಷಯವಿಲ್ಲ. ನಾವು ಜನರು ಬದುಕು ಕಟ್ಟಿಕೊಳ್ಳಲೆಂದು, ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆಂದು 52 ಸಾವಿರ ಕೋಟಿ ಬಜೆಟ್‌ನಲ್ಲಿಟ್ಟು ಜನರಿಗೆ ಪಂಚ ಗ್ಯಾರಂಟಿಗಳ ಮೂಲಕ ಸಹಾಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಬಿಜೆಪಿಗರ ಆಂತರಿಕ ಕಚ್ಚಾಟ ಹಾಗೂ ಕೇಂದ್ರ ಸರ್ಕಾರದ ನೀತಿಗಳು ಎಲ್ಲಾ ವರ್ಗದ ಜನರಿಗೂ ಹೊಡೆತ ನೀಡಿದೆ. ಯಾವ ವರ್ಗವೂ ಇದರ ಹೊರತಾಗಿಲ್ಲ. ಈ ಗುಣಗಾನಗಳನ್ನು ಸಾಮಾನ್ಯ ಜನರ ಬಳಿಯೇ ಕೇಳಬೇಕು ಎಂದು ವ್ಯಂಗ್ಯವಾಡಿದರು.

ನಿನ್ನೆ ಕಚ್ಛಾ ತೈಲದ ಬೆಲೆ 4.3ರಷ್ಟು ಇಳಿಕೆಯಾಗಿದೆ. ಆದರೂ ಕೇಂದ್ರ ಸರ್ಕಾರ ಯಾಕೆ ಇಂಧನ ಬೆಲೆ ಇಳಿಸಿಲ್ಲ? ಪೆಟ್ರೋಲ್‌ ಮೂಲ ಬೆಲೆ ಪ್ರತಿ ಲೀಟರ್‌ಗೆ 42.60 ರೂ. ಇದೆ. ತೆರಿಗೆ ಹೆಚ್ಚಿಸಿ 103 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಒಂದು ಲೀಟರ್‌ಗೆ 60 ರೂ. ಲಾಭ ಕೇಂದ್ರಕ್ಕೆ ಸಿಗುತ್ತಿದೆ. ಡೀಸೆಲ್‌ ಬೆಲೆ 92 ರೂ. ಇದೆ. 43 ರೂ. ಲಾಭ ಅವರಿಗೆ ಸಿಗುತ್ತಿದೆ. ತೈಲ ಬೆಲೆಯ ಮೇಲೆ 60% ತೆರಿಗೆ ಹಾಕುತ್ತಿದ್ದಾರೆ. ‌43 ಲಕ್ಷ ಕೋಟಿ ರೂ. ಅವರು ಈ ಮೂಲಕ ಲೂಟಿ ಹೊಡೆಯುತ್ತಿದ್ದಾರೆ. ತಮ್ಮ ಯಾತ್ರೆ ಕೇಂದ್ರ ಸರ್ಕಾರದ ವಿರುದ್ಧದ ಯಾತ್ರೆ ಎಂದು ರಾಜ್ಯ ಬಿಜೆಪಿಯವರು ಬೋರ್ಡ್‌ ಹಾಕಿಕೊಂಡು ಯಾತ್ರೆ ಮಾಡಬೇಕು ಎಂದರು.

ನಾವು ಹಾಲಿನ ಬೆಲೆ ಏರಿಸಿದ್ದು ರೈತರ ಬದುಕು ಹಸನುಗೊಳಿಸಲು. ಕೇಂದ್ರದಿಂದ ಬೂಸಾ, ಇಂಡಿ ಬೆಲೆ ಏಕೆ ಕಡಿಮೆ ಮಾಡಿಸಲು ಆಗಿಲ್ಲ? ಕೇಂದ್ರದಿಂದಲೇ ಎಲ್ಲಾ ಬೆಲೆಯನ್ನು ಹೆಚ್ಚಿಸಿ, ಈಗ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ನಡೆಸಿದರೆ ಅರ್ಥವಿದೆಯೇ? ಎಂದು ಪ್ರಶ್ನಿಸಿದರು.

ನಮ್ಮಲ್ಲಿ ಹಾಲು ಪ್ರತಿ ಲೀಟರ್‌ಗೆ 42 ರೂ. ಇದೆ. ಆದರೆ, ಕೇರಳದಲ್ಲಿ 52, ಮಹಾರಾಷ್ಟ್ರ 52, ತೆಲಂಗಾಣ 58, ಅಸ್ಸಾಂ 60, ಹರಿಯಾಣ 56, ಮಧ್ಯಪ್ರದೇಶ 52, ಪಂಜಾಬ್‌ 56, ಉತ್ತರ ಪ್ರದೇಶ 56, ಗುಜರಾತ್ 53‌ ರೂ. ಇದೆ. ನಾವು ರೈತರ ಉಳಿಸಲಿಕ್ಕಾಗಿ ಹಾಲಿನ ಬೆಲೆ ಏರಿಸುವ ತೀರ್ಮಾನ ಕೈಗೊಂಡಿದ್ದೇವೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

9 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

9 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

10 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

10 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

11 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

12 hours ago