ರಾಜ್ಯ

ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದೆ. ಆ ಹಣವನ್ನು ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುಖಂಡರನ್ನು ನೇಮಿಸಿ, 25,000 ರೂ. ಸಂಬಳ ನೀಡಿ, ಅವರಿಗೆ ಆಪ್ತ ಸಹಾಯಕರನ್ನು ನೇಮಿಸಲಾಗುತ್ತಿದೆ. 1,100 ರೂ. ಸಿಟ್ಟಿಂಗ್‌ ಫೀಸ್‌ ನಿಗದಿಪಡಿಸಲಾಗಿದೆ. ರಾಜ್ಯದ ಅಧ್ಯಕ್ಷನಿಗೆ 40,000 ರೂ. ಸಂಬಳ, ಉಪಾಧ್ಯಕ್ಷನಿಗೆ 25,000 ರೂ. ಸಂಬಳ ನೀಡಲಾಗುತ್ತಿದೆ. ಪ್ರತಿ ವರ್ಷ 15-20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ ಎಂದರು.

ಸರ್ಕಾರದ ಹಣ ಬಡವರಿಗೆ ತಲುಪಬೇಕು. ಅಂಗನವಾಡಿಯಲ್ಲಿ ಅಡುಗೆ ಮಾಡುವವರಿಗೆ 3,000 ರೂ. ಗೌರವಧನ, ಆಶಾ ಕಾರ್ಯಕರ್ತೆಯರಿಗೆ 7,000 ರೂ. ಗೌರವಧನ, ಅತಿಥಿ ಶಿಕ್ಷಕರಿಗೆ 12,000 ರೂ. ನೀಡಲಾಗುತ್ತಿದೆ. ಇದೇ ಹಣವನ್ನು ವಿಶ್ವವಿದ್ಯಾಲಯಗಳಿಗೆ ನೀಡಬಹುದಿತ್ತು ಅಥವಾ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ನೀಡಬಹುದಿತ್ತು. ಕಾಂಗ್ರೆಸ್‌ ಕಾರ್ಯಕರ್ತರಿಗೆ ಹಣ ನೀಡುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸಲಿದೆ ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾಯಿತ ಶಾಸಕರು ಇರುತ್ತಾರೆ. ಅವರ ಮೇಲೆ ಒಬ್ಬ ಕಾಂಗ್ರೆಸ್‌ ಕಾರ್ಯಕರ್ತನನ್ನು ನೇಮಿಸಿ, ಆತನಿಂದ ನ್ಯಾಯಬೆಲೆ ಅಂಗಡಿಯಲ್ಲಿ ದರ ನಿಗದಿ ಮಾಡಿಸಲಾಗುತ್ತಿದೆ. ಇಲ್ಲಿಂದಲೇ ಅಕ್ರಮ ಆರಂಭವಾಗುತ್ತದೆ. ಸಂವಿಧಾನ ಉಳಿಸಿ, ಸರ್ಕಾರದ ಹಣ ರಕ್ಷಿಸಿ ಎಂದು ಆಗ್ರಹಿಸಿ ವಿಧಾನಸೌಧದ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ಮಾಡಲಾಗುವುದು. ಜೊತೆಗೆ ಅಧಿವೇಶನದಲ್ಲೂ ಧರಣಿ ಮಾಡಲಾಗುವುದು ಎಂದು ತಿಳಿಸಿದರು.

ಸಮಿತಿ ನೇಮಕ ಮಾಡಿ ನ್ಯಾಯಬೆಲೆ ಅಂಗಡಿಗಳ ಸಭೆ ನಡೆಸಲಾಗಿದೆ. ಆಗಲೇ ಇದು ಅಕ್ರಮ ಎಂದು ಗೊತ್ತಾಗಿದೆ. ಕಾಂಗ್ರೆಸ್‌ ಶಾಸಕರಿಗೂ ಇದು ಇಷ್ಟವಾಗಿಲ್ಲ. ಟಿಕೆಟ್‌ ನೀಡಿಲ್ಲದವರಿಗೆ ಈ ಅವಕಾಶ ನೀಡಲಾಗಿದೆ. ಅಂಬೇಡ್ಕರ್‌ ವಸತಿ ಯೋಜನೆ, ಆಶ್ರಯ, ಬಗರ್‌ಹುಕುಂ ಸಾಗುವಳಿ ಯೋಜನೆ ಮೊದಲಾದ ಸಮಿತಿಗಳಿಗೆ ಶಾಸಕರೇ ಅಧ್ಯಕ್ಷರಾಗಿರುತ್ತಾರೆ. ಅದೇ ರೀತಿ ಇದನ್ನೂ ಮಾಡಬೇಕು. ಇದು ಸಂವಿಧಾನ ವಿರೋಧಿಯಾಗಿದೆ. ಶಾಸಕರ ಅಧಿಕಾರವನ್ನು ಮೊಟಕು ಮಾಡುವುದು ಸರಿಯಲ್ಲ ಎಂದು ಖಂಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

3 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

6 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

6 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

7 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

7 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

7 hours ago