ರಾಜ್ಯ

ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದೆ. ಆ ಹಣವನ್ನು ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುಖಂಡರನ್ನು ನೇಮಿಸಿ, 25,000 ರೂ. ಸಂಬಳ ನೀಡಿ, ಅವರಿಗೆ ಆಪ್ತ ಸಹಾಯಕರನ್ನು ನೇಮಿಸಲಾಗುತ್ತಿದೆ. 1,100 ರೂ. ಸಿಟ್ಟಿಂಗ್‌ ಫೀಸ್‌ ನಿಗದಿಪಡಿಸಲಾಗಿದೆ. ರಾಜ್ಯದ ಅಧ್ಯಕ್ಷನಿಗೆ 40,000 ರೂ. ಸಂಬಳ, ಉಪಾಧ್ಯಕ್ಷನಿಗೆ 25,000 ರೂ. ಸಂಬಳ ನೀಡಲಾಗುತ್ತಿದೆ. ಪ್ರತಿ ವರ್ಷ 15-20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ ಎಂದರು.

ಸರ್ಕಾರದ ಹಣ ಬಡವರಿಗೆ ತಲುಪಬೇಕು. ಅಂಗನವಾಡಿಯಲ್ಲಿ ಅಡುಗೆ ಮಾಡುವವರಿಗೆ 3,000 ರೂ. ಗೌರವಧನ, ಆಶಾ ಕಾರ್ಯಕರ್ತೆಯರಿಗೆ 7,000 ರೂ. ಗೌರವಧನ, ಅತಿಥಿ ಶಿಕ್ಷಕರಿಗೆ 12,000 ರೂ. ನೀಡಲಾಗುತ್ತಿದೆ. ಇದೇ ಹಣವನ್ನು ವಿಶ್ವವಿದ್ಯಾಲಯಗಳಿಗೆ ನೀಡಬಹುದಿತ್ತು ಅಥವಾ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ನೀಡಬಹುದಿತ್ತು. ಕಾಂಗ್ರೆಸ್‌ ಕಾರ್ಯಕರ್ತರಿಗೆ ಹಣ ನೀಡುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸಲಿದೆ ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾಯಿತ ಶಾಸಕರು ಇರುತ್ತಾರೆ. ಅವರ ಮೇಲೆ ಒಬ್ಬ ಕಾಂಗ್ರೆಸ್‌ ಕಾರ್ಯಕರ್ತನನ್ನು ನೇಮಿಸಿ, ಆತನಿಂದ ನ್ಯಾಯಬೆಲೆ ಅಂಗಡಿಯಲ್ಲಿ ದರ ನಿಗದಿ ಮಾಡಿಸಲಾಗುತ್ತಿದೆ. ಇಲ್ಲಿಂದಲೇ ಅಕ್ರಮ ಆರಂಭವಾಗುತ್ತದೆ. ಸಂವಿಧಾನ ಉಳಿಸಿ, ಸರ್ಕಾರದ ಹಣ ರಕ್ಷಿಸಿ ಎಂದು ಆಗ್ರಹಿಸಿ ವಿಧಾನಸೌಧದ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ಮಾಡಲಾಗುವುದು. ಜೊತೆಗೆ ಅಧಿವೇಶನದಲ್ಲೂ ಧರಣಿ ಮಾಡಲಾಗುವುದು ಎಂದು ತಿಳಿಸಿದರು.

ಸಮಿತಿ ನೇಮಕ ಮಾಡಿ ನ್ಯಾಯಬೆಲೆ ಅಂಗಡಿಗಳ ಸಭೆ ನಡೆಸಲಾಗಿದೆ. ಆಗಲೇ ಇದು ಅಕ್ರಮ ಎಂದು ಗೊತ್ತಾಗಿದೆ. ಕಾಂಗ್ರೆಸ್‌ ಶಾಸಕರಿಗೂ ಇದು ಇಷ್ಟವಾಗಿಲ್ಲ. ಟಿಕೆಟ್‌ ನೀಡಿಲ್ಲದವರಿಗೆ ಈ ಅವಕಾಶ ನೀಡಲಾಗಿದೆ. ಅಂಬೇಡ್ಕರ್‌ ವಸತಿ ಯೋಜನೆ, ಆಶ್ರಯ, ಬಗರ್‌ಹುಕುಂ ಸಾಗುವಳಿ ಯೋಜನೆ ಮೊದಲಾದ ಸಮಿತಿಗಳಿಗೆ ಶಾಸಕರೇ ಅಧ್ಯಕ್ಷರಾಗಿರುತ್ತಾರೆ. ಅದೇ ರೀತಿ ಇದನ್ನೂ ಮಾಡಬೇಕು. ಇದು ಸಂವಿಧಾನ ವಿರೋಧಿಯಾಗಿದೆ. ಶಾಸಕರ ಅಧಿಕಾರವನ್ನು ಮೊಟಕು ಮಾಡುವುದು ಸರಿಯಲ್ಲ ಎಂದು ಖಂಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

8 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

17 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago