r ashok
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಬಜೆಟ್ನಲ್ಲಿ ಕಾಂಗ್ರೆಸ್ ಸರ್ಕಾರದ ದೋಷಗಳನ್ನು ಸಮರ್ಥವಾಗಿ ಮಂಡನೆ ಮಾಡಲಾಗುವುದು. ಕಾಂಗ್ರೆಸ್ ಒಡೆದ ಮನೆಯಾಗಿದ್ದು, ಶಾಸಕರು ಬೀದಿಯಲ್ಲಿ ನಿಂತು ಧಮ್ಕಿ ಹಾಕುತ್ತಿದ್ದಾರೆ. ಕಾಂಗ್ರೆಸ್ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಕ್ರಮ ನಡೆದಿದೆ. ಕಳೆದ ಮೂರು ಬಜೆಟ್ನಲ್ಲಿ ಅನುದಾನ ಘೋಷಣೆಯಾದರೂ ಬಿಡುಗಡೆಯಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಮಟ್ಟದಲ್ಲಿ ಸಾಲ ಮಾಡಿದ್ದಾರೆ. ಹಿಂದೂಗಳ ಮೇಲೆ ಹಲ್ಲೆಯಾಗುತ್ತಿದೆ. ಬೆಂಗಳೂರಿನಲ್ಲಿ ಕಸದ ಸಮಸ್ಯೆ ಹೆಚ್ಚಿದೆ. ಕಂದಾಯ ಇಲಾಖೆಯಲ್ಲಿ ಇ ಖಾತಾ ಸಮಸ್ಯೆ ಇದೆ. ಈ ಎಲ್ಲ ವಿಷಯಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ರಾಜ್ಯ ಸರ್ಕಾರ ಮೂರೂವರೆ ಲಕ್ಷ ಕೋಟಿ ರೂ. ಸಾಲ ಮಾಡಿದೆ. ಹಿಂದಿನ ಎಲ್ಲ ಮುಖ್ಯಮಂತ್ರಿಗಳನ್ನು ಮೀರಿ ಸಿದ್ದರಾಮಯ್ಯ ಸಾಲ ಮಾಡಿದ್ದು, ಅವಧಿ ಮುಗಿಯುವ ವೇಳೆಗೆ ಸಾಲದ ಪ್ರಮಾಣ 6 ಲಕ್ಷ ಕೋಟಿ ರೂ. ಗೆ ಹೋಗಲಿದೆ. ಪ್ರತಿ ವ್ಯಕ್ತಿಯ ಮೇಲೆ 1 ಲಕ್ಷ ರೂ. ಸಾಲ ಇರಲಿದೆ. ಇಂತಹ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…