ಬೆಳಗಾವಿ: ಡಿಸೆಂಬರ್.16ರಂದು ಇಡೀ ದಿನ ಸುವರ್ಣ ಸೌಧದ ಮುಂದೆ ಧರಣಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸ್ವಾಮೀಜಿ ಅವರು, ಪಂಚಮಸಾಲಿ ಸಮಾಜದವರು ಶಾಂತಿಯುತವಾಗಿ ಹೋರಾಟ ನಡೆಸಿದ್ದೆವು. ಸಾರ್ವಜನಿಕರ ವೇಷದಲ್ಲಿ ಬಂದ ಪೊಲೀಸರೇ ನಮ್ಮವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸಮವಸ್ತ್ರದಲ್ಲಿದ್ದವರು ಲಾಠಿಚಾರ್ಜ್ ನಡೆಸಿದ್ದಾರೆ. ಇದು ವ್ಯವಸ್ಥಿತ ಷಡ್ಯಂತ್ರ ಎಂದು ಕಿಡಿಕಾರಿದರು.
ಹೋರಾಟ ನಿಯಂತ್ರಣ ತಪ್ಪುವ ಸಾಧ್ಯತೆಯಿದ್ದರೆ ಜಲಫಿರಂಗಿ ಬಳಸಬಹುದಿತ್ತು. ಲಾಠಿಚಾರ್ಜ್ ಮಾಡಲೇಬೇಕು ಎಂದು ಏಕೆ ನಿರ್ಧರಿಸಿದರು? ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಲಾಠಿಚಾರ್ಜ್ ಆದೇಶ ನೀಡಿದ್ದಾರೆ. ಅವರು ಆದೇಶ ನೀಡಿಲ್ಲ ಎಂದರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಲಿ ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ಈವರೆಗಿನ ಯಾವುದೇ ಸರ್ಕಾರ ಲಿಂಗಾಯತರ ಮೇಲೆ ದಾಳಿ ಮಾಡಿರಲಿಲ್ಲ. ಸಿದ್ದರಾಮಯ್ಯ ಅವರೇ ಲಿಂಗಾಯತರ ಮೇಲೆ ಲಾಠಿ ಎತ್ತಿದ ಮೊದಲ ಸಿಎಂ. ಇವರೊಬ್ಬ ಲಿಂಗಾಯತ ವಿರೋಧಿ ನಾಯಕ ಎಂದು ವಾಗ್ದಾಳಿ ನಡೆಸಿದರು.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…