ಬೆಳಗಾವಿ: ಡಿಸೆಂಬರ್.16ರಂದು ಇಡೀ ದಿನ ಸುವರ್ಣ ಸೌಧದ ಮುಂದೆ ಧರಣಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸ್ವಾಮೀಜಿ ಅವರು, ಪಂಚಮಸಾಲಿ ಸಮಾಜದವರು ಶಾಂತಿಯುತವಾಗಿ ಹೋರಾಟ ನಡೆಸಿದ್ದೆವು. ಸಾರ್ವಜನಿಕರ ವೇಷದಲ್ಲಿ ಬಂದ ಪೊಲೀಸರೇ ನಮ್ಮವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸಮವಸ್ತ್ರದಲ್ಲಿದ್ದವರು ಲಾಠಿಚಾರ್ಜ್ ನಡೆಸಿದ್ದಾರೆ. ಇದು ವ್ಯವಸ್ಥಿತ ಷಡ್ಯಂತ್ರ ಎಂದು ಕಿಡಿಕಾರಿದರು.
ಹೋರಾಟ ನಿಯಂತ್ರಣ ತಪ್ಪುವ ಸಾಧ್ಯತೆಯಿದ್ದರೆ ಜಲಫಿರಂಗಿ ಬಳಸಬಹುದಿತ್ತು. ಲಾಠಿಚಾರ್ಜ್ ಮಾಡಲೇಬೇಕು ಎಂದು ಏಕೆ ನಿರ್ಧರಿಸಿದರು? ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಲಾಠಿಚಾರ್ಜ್ ಆದೇಶ ನೀಡಿದ್ದಾರೆ. ಅವರು ಆದೇಶ ನೀಡಿಲ್ಲ ಎಂದರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಲಿ ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ಈವರೆಗಿನ ಯಾವುದೇ ಸರ್ಕಾರ ಲಿಂಗಾಯತರ ಮೇಲೆ ದಾಳಿ ಮಾಡಿರಲಿಲ್ಲ. ಸಿದ್ದರಾಮಯ್ಯ ಅವರೇ ಲಿಂಗಾಯತರ ಮೇಲೆ ಲಾಠಿ ಎತ್ತಿದ ಮೊದಲ ಸಿಎಂ. ಇವರೊಬ್ಬ ಲಿಂಗಾಯತ ವಿರೋಧಿ ನಾಯಕ ಎಂದು ವಾಗ್ದಾಳಿ ನಡೆಸಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…