ರಾಜ್ಯ

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರೋಧ ಫೆ.7ಕ್ಕೆ ನವದೆಹಲಿಯಲ್ಲಿ ಪ್ರತಿಭಟನೆ : ಸಿಎಂ ಸಿದ್ದರಾಮಯ್ಯ

ಹಂಪಿ : ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸೆಗಲಾಗಿದೆ. ರಾಜ್ಯಕ್ಕೆ ಬರಗಾಲದ ಪರಿಹಾರವಾಗಿ ಎನ್ ಡಿಆರ್ ಎಫ್ ನಿಂದ 4663 ಕೋಟಿ ರೂ. ಮೊತ್ತವನ್ನು ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳೂ ಕಳೆದಿದ್ದರೂ, ಕೇಂದ್ರದಿಂದ ಯಾವ ಸ್ಪಂದನೆಯೂ ದೊರೆತಿಲ್ಲ.

ಈ ಎಲ್ಲ ಕಾರಣಗಳಿಗಾಗಿ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾನೂ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ದೇಶ ಅಖಂಡವಾಗಿರಬೇಕು: ಸಂಸದ ಡಿ.ಕೆ.ಸುರೇಶ್ ಅವರ ದೇಶವನ್ನು ಇಬ್ಭಾಗವಾಗಿಸುವ ಹೇಳಿಕೆ ಕೇಂದ್ರ ಅಧಿವೇಶನದಲ್ಲಿ ಚರ್ಚೆಯಾಗಿರುವ ಬಗ್ಗೆ ಬಿಜೆಪಿಯವರು ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ದೇಶವನ್ನು ಇಬ್ಬಾಗವಾಗಿಸುವ ಉದ್ದೇಶದಿಂದ ಸಂಸದ ಡಿ.ಕೆ.ಸುರೇಶ್ ಅವರು ಆ ಹೇಳಿಕೆಯನ್ನು ನೀಡಿರುವುದಿಲ್ಲ. ದೇಶ ಅಖಂಡವಾಗಿರಬೇಕೆಂಬುದು ನಾವು ಬಯಸುತ್ತೇವೆ. ಬಿಜೆಪಿಯವರು ಕೇಂದ್ರ ಬಜೆಟ್ ನಲ್ಲಿ ಬಡವರು, ರೈತರು, ನಿರುದ್ಯೋಗ ವಿಷಯಗಳ ಬಗ್ಗೆ ಚರ್ಚೆ ಮಾಡಿ, ಪರಿಹಾರ ನೀಡುವ ಬದಲು ಇಂತಹ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಾರೆ ಎಂದರು.

ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದರೂ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 5495 ಕೋಟಿ ರೂ. ಹಾಗೂ ಇಲ್ಲಿನ ಫೆರಿಫೆರಲ್ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಪ್ರಮುಖ ಯೋಜನೆಗಳಿಗೆ 6000 ಕೋಟಿ ರೂ. ಒದಗಿಸುವ ಸಾಧ್ಯತೆ ಇತ್ತು. ಆದರೆ ಯಾವುದೇ ಅನುದಾನವನ್ನು ನೀಡಿಲ್ಲ ಎಂದು ತಿಳಿಸಿದರು.

ಜನರಿಗಾಗಿ ಸಾಂಸ್ಕೃತಿಕ ಉತ್ಸವ : ಇಂದಿನಿಂದ ಮೂರು ದಿನಗಳ ಕಾಲ ಹಂಪ ಉತ್ಸವ ನಡೆಯಲಿದೆ. ಜನರಿಗಾಗಿ ಹಾಗೂ ಕಲಾವಿದರಿಗಾಗಿ ಉತ್ಸವಗಳನ್ನು ಆಚರಿಸಲಾಗುತ್ತದೆ. ಬರಗಾಲವಿದ್ದರೂ ಉತ್ಸವಗಳನ್ನು ಮಾಡದೇ ಇರಲು ಸಾಧ್ಯವಿಲ್ಲ. ಇದೊಂದು ಸಾಂಸ್ಕೃತಿಕ ಉತ್ಸವ ಎಂದು ತಿಳಿಸಿದರು.

andolanait

Recent Posts

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

7 mins ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

26 mins ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

45 mins ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

51 mins ago

ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…

1 hour ago

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…

2 hours ago