ಹಂಪಿ : ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸೆಗಲಾಗಿದೆ. ರಾಜ್ಯಕ್ಕೆ ಬರಗಾಲದ ಪರಿಹಾರವಾಗಿ ಎನ್ ಡಿಆರ್ ಎಫ್ ನಿಂದ 4663 ಕೋಟಿ ರೂ. ಮೊತ್ತವನ್ನು ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳೂ ಕಳೆದಿದ್ದರೂ, ಕೇಂದ್ರದಿಂದ ಯಾವ ಸ್ಪಂದನೆಯೂ ದೊರೆತಿಲ್ಲ.
ಈ ಎಲ್ಲ ಕಾರಣಗಳಿಗಾಗಿ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾನೂ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ದೇಶ ಅಖಂಡವಾಗಿರಬೇಕು: ಸಂಸದ ಡಿ.ಕೆ.ಸುರೇಶ್ ಅವರ ದೇಶವನ್ನು ಇಬ್ಭಾಗವಾಗಿಸುವ ಹೇಳಿಕೆ ಕೇಂದ್ರ ಅಧಿವೇಶನದಲ್ಲಿ ಚರ್ಚೆಯಾಗಿರುವ ಬಗ್ಗೆ ಬಿಜೆಪಿಯವರು ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ದೇಶವನ್ನು ಇಬ್ಬಾಗವಾಗಿಸುವ ಉದ್ದೇಶದಿಂದ ಸಂಸದ ಡಿ.ಕೆ.ಸುರೇಶ್ ಅವರು ಆ ಹೇಳಿಕೆಯನ್ನು ನೀಡಿರುವುದಿಲ್ಲ. ದೇಶ ಅಖಂಡವಾಗಿರಬೇಕೆಂಬುದು ನಾವು ಬಯಸುತ್ತೇವೆ. ಬಿಜೆಪಿಯವರು ಕೇಂದ್ರ ಬಜೆಟ್ ನಲ್ಲಿ ಬಡವರು, ರೈತರು, ನಿರುದ್ಯೋಗ ವಿಷಯಗಳ ಬಗ್ಗೆ ಚರ್ಚೆ ಮಾಡಿ, ಪರಿಹಾರ ನೀಡುವ ಬದಲು ಇಂತಹ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಾರೆ ಎಂದರು.
ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದರೂ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 5495 ಕೋಟಿ ರೂ. ಹಾಗೂ ಇಲ್ಲಿನ ಫೆರಿಫೆರಲ್ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಪ್ರಮುಖ ಯೋಜನೆಗಳಿಗೆ 6000 ಕೋಟಿ ರೂ. ಒದಗಿಸುವ ಸಾಧ್ಯತೆ ಇತ್ತು. ಆದರೆ ಯಾವುದೇ ಅನುದಾನವನ್ನು ನೀಡಿಲ್ಲ ಎಂದು ತಿಳಿಸಿದರು.
ಜನರಿಗಾಗಿ ಸಾಂಸ್ಕೃತಿಕ ಉತ್ಸವ : ಇಂದಿನಿಂದ ಮೂರು ದಿನಗಳ ಕಾಲ ಹಂಪ ಉತ್ಸವ ನಡೆಯಲಿದೆ. ಜನರಿಗಾಗಿ ಹಾಗೂ ಕಲಾವಿದರಿಗಾಗಿ ಉತ್ಸವಗಳನ್ನು ಆಚರಿಸಲಾಗುತ್ತದೆ. ಬರಗಾಲವಿದ್ದರೂ ಉತ್ಸವಗಳನ್ನು ಮಾಡದೇ ಇರಲು ಸಾಧ್ಯವಿಲ್ಲ. ಇದೊಂದು ಸಾಂಸ್ಕೃತಿಕ ಉತ್ಸವ ಎಂದು ತಿಳಿಸಿದರು.
ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ…
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…