ರಾಜ್ಯ

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರೋಧ ಫೆ.7ಕ್ಕೆ ನವದೆಹಲಿಯಲ್ಲಿ ಪ್ರತಿಭಟನೆ : ಸಿಎಂ ಸಿದ್ದರಾಮಯ್ಯ

ಹಂಪಿ : ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸೆಗಲಾಗಿದೆ. ರಾಜ್ಯಕ್ಕೆ ಬರಗಾಲದ ಪರಿಹಾರವಾಗಿ ಎನ್ ಡಿಆರ್ ಎಫ್ ನಿಂದ 4663 ಕೋಟಿ ರೂ. ಮೊತ್ತವನ್ನು ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳೂ ಕಳೆದಿದ್ದರೂ, ಕೇಂದ್ರದಿಂದ ಯಾವ ಸ್ಪಂದನೆಯೂ ದೊರೆತಿಲ್ಲ.

ಈ ಎಲ್ಲ ಕಾರಣಗಳಿಗಾಗಿ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾನೂ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ದೇಶ ಅಖಂಡವಾಗಿರಬೇಕು: ಸಂಸದ ಡಿ.ಕೆ.ಸುರೇಶ್ ಅವರ ದೇಶವನ್ನು ಇಬ್ಭಾಗವಾಗಿಸುವ ಹೇಳಿಕೆ ಕೇಂದ್ರ ಅಧಿವೇಶನದಲ್ಲಿ ಚರ್ಚೆಯಾಗಿರುವ ಬಗ್ಗೆ ಬಿಜೆಪಿಯವರು ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ದೇಶವನ್ನು ಇಬ್ಬಾಗವಾಗಿಸುವ ಉದ್ದೇಶದಿಂದ ಸಂಸದ ಡಿ.ಕೆ.ಸುರೇಶ್ ಅವರು ಆ ಹೇಳಿಕೆಯನ್ನು ನೀಡಿರುವುದಿಲ್ಲ. ದೇಶ ಅಖಂಡವಾಗಿರಬೇಕೆಂಬುದು ನಾವು ಬಯಸುತ್ತೇವೆ. ಬಿಜೆಪಿಯವರು ಕೇಂದ್ರ ಬಜೆಟ್ ನಲ್ಲಿ ಬಡವರು, ರೈತರು, ನಿರುದ್ಯೋಗ ವಿಷಯಗಳ ಬಗ್ಗೆ ಚರ್ಚೆ ಮಾಡಿ, ಪರಿಹಾರ ನೀಡುವ ಬದಲು ಇಂತಹ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಾರೆ ಎಂದರು.

ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದರೂ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 5495 ಕೋಟಿ ರೂ. ಹಾಗೂ ಇಲ್ಲಿನ ಫೆರಿಫೆರಲ್ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಪ್ರಮುಖ ಯೋಜನೆಗಳಿಗೆ 6000 ಕೋಟಿ ರೂ. ಒದಗಿಸುವ ಸಾಧ್ಯತೆ ಇತ್ತು. ಆದರೆ ಯಾವುದೇ ಅನುದಾನವನ್ನು ನೀಡಿಲ್ಲ ಎಂದು ತಿಳಿಸಿದರು.

ಜನರಿಗಾಗಿ ಸಾಂಸ್ಕೃತಿಕ ಉತ್ಸವ : ಇಂದಿನಿಂದ ಮೂರು ದಿನಗಳ ಕಾಲ ಹಂಪ ಉತ್ಸವ ನಡೆಯಲಿದೆ. ಜನರಿಗಾಗಿ ಹಾಗೂ ಕಲಾವಿದರಿಗಾಗಿ ಉತ್ಸವಗಳನ್ನು ಆಚರಿಸಲಾಗುತ್ತದೆ. ಬರಗಾಲವಿದ್ದರೂ ಉತ್ಸವಗಳನ್ನು ಮಾಡದೇ ಇರಲು ಸಾಧ್ಯವಿಲ್ಲ. ಇದೊಂದು ಸಾಂಸ್ಕೃತಿಕ ಉತ್ಸವ ಎಂದು ತಿಳಿಸಿದರು.

andolanait

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

5 mins ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

18 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

20 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

22 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

24 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

29 mins ago