ರಾಜ್ಯ

ಲಾಲ್‌ಬಾಗ್‌ ಉಳಿಸಲು ನವೆಂಬರ್‌ 2 ರಂದು ಪ್ರತಿಭಟನೆ : ಆರ್.ಅಶೋಕ

ಬಿಜೆಪಿಯ ಶಾಸಕರು ಹಾಗೂ ವಿವಿಧ ಸಂಘಟನೆಗಳು ಭಾಗಿ

ಬೆಂಗಳೂರು : ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್‌ಬಾಗ್‌ನಲ್ಲಿ ನವೆಂಬರ್‌ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆಯ ಹೆಸರು ಕೇಳಿದರೆ ಜನರು ಭೀತಿಗೊಳ್ಳುತ್ತಿದ್ದಾರೆ. ಎಲ್ಲಿ ಯಾರ ಮನೆ ಹೋಗಲಿದೆ ಎಂದು ತಿಳಿಯುತ್ತಿಲ್ಲ. ಲಾಲ್‌ಬಾಗ್‌ನಲ್ಲಿ 6 ಎಕರೆ ಜಮೀನು ಕಬಳಿಕೆ ಮಾಡಿ ಯೋಜನೆ ಮಾಡಲಾಗುತ್ತದೆ. ಇದಕ್ಕೆ ಯಾವ ಇಲಾಖೆಯೂ ಅನುಮತಿ ನೀಡಿಲ್ಲ. ಬಿಹಾರ ಚುನಾವಣೆ ಬಂದಿರುವುದರಿಂದ ಹಣ ಮಾಡಲು ಈ ಯೋಜನೆ ಜಾರಿ ಮಾಡುತ್ತಿರಬಹುದು. ಲಾಲ್‌ಬಾಗ್‌ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಘೋಷಣೆಯಡಿ ಇದೇ ನವೆಂಬರ್‌ 2 ರ ಭಾನುವಾರ ಬೆಳಗ್ಗೆ 8 ಗಂಟೆಗೆ ಲಾಲ್‌ಬಾಗ್‌ನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಎಲ್ಲ ಶಾಸಕರು ಸಭೆ ಸೇರಿ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಹೋರಾಟ ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ. ಬಿಜೆಪಿ ಅವಧಿಯಲ್ಲಿ ರಸ್ತೆ ದುರಸ್ತಿಗೆ 8,000 ಕೋಟಿ ರೂ. ನೀಡಲಾಗಿತ್ತು. ಈಗ ಕಾಂಗ್ರೆಸ್‌ ಸರ್ಕಾರ ಡಾಂಬರೀಕರಣ ಬಿಟ್ಟು ಹೊಸದಾಗಿ ರಸ್ತೆ ನಿರ್ಮಿಸಬೇಕಿದೆ. ಸಿಎಂ ಸಿದ್ದರಾಮಯ್ಯ ಒಮ್ಮೊಮ್ಮೆ ಒಂದೊಂದು ರೀತಿಯ ಅನುದಾನದ ಬಗ್ಗೆ ಹೇಳುತ್ತಿದ್ದಾರೆ. ಕಾಟಾಚಾರಕ್ಕೆ ಬ್ರ್ಯಾಂಡ್‌ ಬೆಂಗಳೂರಿನ ಘೋಷಣೆ ಮಾಡಲಾಗುತ್ತಿದೆ. ಡಿ.ಕೆ.ಶಿವಕುಮಾರ್‌ ಯಾವಾಗಲೂ ಬ್ರ್ಯಾಂಡ್‌ ಬಗ್ಗೆ ಹೇಳುತ್ತಾರೆ. ಅಧಿಕಾರಿಗಳಂತೂ ಇವರ ಮಾತನ್ನು ಕೇಳುತ್ತಿಲ್ಲ ಎಂದರು.

ಸಂಸದ ತೇಜಸ್ವಿ ಸೂರ್ಯ ಅವರನ್ನು ಅವಹೇಳನ ಮಾಡುವುದು ತಪ್ಪು. ಇದು ಒಂದು ಲೋಕಸಭಾ ಕ್ಷೇತ್ರಕ್ಕೆ ಮಾಡುವ ಅಪಮಾನ. ಸಿಎಂ ಹಾಗೂ ಡಿಸಿಎಂ ಗೌರವ ಕೊಟ್ಟು ಮಾತಾಡುವುದನ್ನು ಕಲಿಯಲಿ ಎಂದರು.

ಇದನ್ನೂ ಓದಿ:-ಸಿದ್ದು ಸ್ಪರ್ಧೆಗೆ ಯಾರ ವಿರೋಧವೂ ಇಲ್ಲ : ಬೈರತಿ ಸುರೇಶ್

ಧರ್ಮಸ್ಥಳ ಕುರಿತು ಅಪಪ್ರಚಾರ
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿರುವುದು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮವಾಗಿದೆ. ಅಪಪ್ರಚಾರ ಮಾಡಿರುವವರಿಗೆ ಶಿಕ್ಷೆಯಾಗಬೇಕು. ಅದಕ್ಕಾಗಿ ಸರ್ಕಾರ ಸೂಕ್ತ ಕ್ರಮ ವಹಿಸಬೇಕಿದೆ. ಡಿ.ಕೆ.ಶಿವಕುಮಾರ್‌ ಈ ಬಗ್ಗೆ ಮಾಧ್ಯಮಗಳ ಮುಂದೆ ಪ್ರಶ್ನೆ ಕೇಳುವ ಬದಲು, ಸಚಿವ ಸಂಪುಟದಲ್ಲೇ ಪ್ರಶ್ನೆ ಕೇಳಬೇಕಿತ್ತು. ಎಸ್‌ಐಟಿ ರಚಿಸುವುದನ್ನು ಅವರು ಮೊದಲೇ ತಡೆಯಬಹುದಿತ್ತು ಎಂದರು.

ನಿವೇಶನಗಳಿಗೆ, ಖಾತಾಗೆ ಸಂಬಂಧಿಸಿದಂತೆ ವಸೂಲಿ ಮಾಡಲಾಗುತ್ತಿದೆ. ಒಸಿ, ಸಿಸಿಗೆ ಕಮಿಶನ್‌ ನಿಗದಿಯಾಗಿದೆ. ಯಾರೂ ಮನೆ ಕಟ್ಟಲು ಸಾಧ್ಯವಿಲ್ಲ. ಅಭಿವೃದ್ಧಿ ಶುಲ್ಕವನ್ನು 4-5 ಲಕ್ಷ ರೂ. ಗೆ ಏರಿಸಲಾಗಿದೆ. ಕರ್ನಾಟಕವೆಂದರೆ ಕಲೆಕ್ಷನ್‌ ಸೆಂಟರ್‌ ಆಗಿದೆ ಎಂದರು.

ಕಾಂಗ್ರೆಸ್‌ ಸರ್ಕಾರ ವಯನಾಡಿನಲ್ಲಿದೆ. ಹಿಂದೆ ಆನೆಯಿಂದ ಸತ್ತಿದ್ದಕ್ಕೆ ಪರಿಹಾರ ಕೊಟ್ಟಿದ್ದರು. ಈಗ ವಯನಾಡಿನಲ್ಲಿ ಪ್ರವಾಸ ಮಾಡಿ ಎಂದು ಜಾಹೀರಾತು ನೀಡುತ್ತಿದ್ದಾರೆ. ಅಲ್ಲಿ ಕರ್ನಾಟಕದ ಯಾವುದೇ ಸ್ಥಳ ಇಲ್ಲ. ಜೋಗ, ಹಂಪಿ, ಕೊಡಗು, ಗೋಕರ್ಣದಲ್ಲಿರುವಂತಹ ಸ್ಥಳ ವಯನಾಡಿನಲ್ಲಿ ಇಲ್ಲ. ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ಅವರ ಫ್ಲೆಕ್ಸ್‌ ನೋಡಲು ಜನರು ಅಲ್ಲಿಗೆ ಪ್ರವಾಸ ಹೋಗಬೇಕಿದೆ. ಮೈಸೂರು ಅರಮನೆ ಬಗ್ಗೆ ಪ್ರಚಾರ ಮಾಡುವುದನ್ನು ಬಿಟ್ಟು ವಯನಾಡಿನ ರಾಹುಲ್‌ ಗಾಂಧಿ ಅರಮನೆ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

2 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

2 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

3 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

3 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

3 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

4 hours ago