ರಾಜ್ಯ

ಲಾಲ್‌ಬಾಗ್‌ ಉಳಿಸಲು ನವೆಂಬರ್‌ 2 ರಂದು ಪ್ರತಿಭಟನೆ : ಆರ್.ಅಶೋಕ

ಬಿಜೆಪಿಯ ಶಾಸಕರು ಹಾಗೂ ವಿವಿಧ ಸಂಘಟನೆಗಳು ಭಾಗಿ

ಬೆಂಗಳೂರು : ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್‌ಬಾಗ್‌ನಲ್ಲಿ ನವೆಂಬರ್‌ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆಯ ಹೆಸರು ಕೇಳಿದರೆ ಜನರು ಭೀತಿಗೊಳ್ಳುತ್ತಿದ್ದಾರೆ. ಎಲ್ಲಿ ಯಾರ ಮನೆ ಹೋಗಲಿದೆ ಎಂದು ತಿಳಿಯುತ್ತಿಲ್ಲ. ಲಾಲ್‌ಬಾಗ್‌ನಲ್ಲಿ 6 ಎಕರೆ ಜಮೀನು ಕಬಳಿಕೆ ಮಾಡಿ ಯೋಜನೆ ಮಾಡಲಾಗುತ್ತದೆ. ಇದಕ್ಕೆ ಯಾವ ಇಲಾಖೆಯೂ ಅನುಮತಿ ನೀಡಿಲ್ಲ. ಬಿಹಾರ ಚುನಾವಣೆ ಬಂದಿರುವುದರಿಂದ ಹಣ ಮಾಡಲು ಈ ಯೋಜನೆ ಜಾರಿ ಮಾಡುತ್ತಿರಬಹುದು. ಲಾಲ್‌ಬಾಗ್‌ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಘೋಷಣೆಯಡಿ ಇದೇ ನವೆಂಬರ್‌ 2 ರ ಭಾನುವಾರ ಬೆಳಗ್ಗೆ 8 ಗಂಟೆಗೆ ಲಾಲ್‌ಬಾಗ್‌ನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಎಲ್ಲ ಶಾಸಕರು ಸಭೆ ಸೇರಿ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಹೋರಾಟ ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ. ಬಿಜೆಪಿ ಅವಧಿಯಲ್ಲಿ ರಸ್ತೆ ದುರಸ್ತಿಗೆ 8,000 ಕೋಟಿ ರೂ. ನೀಡಲಾಗಿತ್ತು. ಈಗ ಕಾಂಗ್ರೆಸ್‌ ಸರ್ಕಾರ ಡಾಂಬರೀಕರಣ ಬಿಟ್ಟು ಹೊಸದಾಗಿ ರಸ್ತೆ ನಿರ್ಮಿಸಬೇಕಿದೆ. ಸಿಎಂ ಸಿದ್ದರಾಮಯ್ಯ ಒಮ್ಮೊಮ್ಮೆ ಒಂದೊಂದು ರೀತಿಯ ಅನುದಾನದ ಬಗ್ಗೆ ಹೇಳುತ್ತಿದ್ದಾರೆ. ಕಾಟಾಚಾರಕ್ಕೆ ಬ್ರ್ಯಾಂಡ್‌ ಬೆಂಗಳೂರಿನ ಘೋಷಣೆ ಮಾಡಲಾಗುತ್ತಿದೆ. ಡಿ.ಕೆ.ಶಿವಕುಮಾರ್‌ ಯಾವಾಗಲೂ ಬ್ರ್ಯಾಂಡ್‌ ಬಗ್ಗೆ ಹೇಳುತ್ತಾರೆ. ಅಧಿಕಾರಿಗಳಂತೂ ಇವರ ಮಾತನ್ನು ಕೇಳುತ್ತಿಲ್ಲ ಎಂದರು.

ಸಂಸದ ತೇಜಸ್ವಿ ಸೂರ್ಯ ಅವರನ್ನು ಅವಹೇಳನ ಮಾಡುವುದು ತಪ್ಪು. ಇದು ಒಂದು ಲೋಕಸಭಾ ಕ್ಷೇತ್ರಕ್ಕೆ ಮಾಡುವ ಅಪಮಾನ. ಸಿಎಂ ಹಾಗೂ ಡಿಸಿಎಂ ಗೌರವ ಕೊಟ್ಟು ಮಾತಾಡುವುದನ್ನು ಕಲಿಯಲಿ ಎಂದರು.

ಇದನ್ನೂ ಓದಿ:-ಸಿದ್ದು ಸ್ಪರ್ಧೆಗೆ ಯಾರ ವಿರೋಧವೂ ಇಲ್ಲ : ಬೈರತಿ ಸುರೇಶ್

ಧರ್ಮಸ್ಥಳ ಕುರಿತು ಅಪಪ್ರಚಾರ
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿರುವುದು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮವಾಗಿದೆ. ಅಪಪ್ರಚಾರ ಮಾಡಿರುವವರಿಗೆ ಶಿಕ್ಷೆಯಾಗಬೇಕು. ಅದಕ್ಕಾಗಿ ಸರ್ಕಾರ ಸೂಕ್ತ ಕ್ರಮ ವಹಿಸಬೇಕಿದೆ. ಡಿ.ಕೆ.ಶಿವಕುಮಾರ್‌ ಈ ಬಗ್ಗೆ ಮಾಧ್ಯಮಗಳ ಮುಂದೆ ಪ್ರಶ್ನೆ ಕೇಳುವ ಬದಲು, ಸಚಿವ ಸಂಪುಟದಲ್ಲೇ ಪ್ರಶ್ನೆ ಕೇಳಬೇಕಿತ್ತು. ಎಸ್‌ಐಟಿ ರಚಿಸುವುದನ್ನು ಅವರು ಮೊದಲೇ ತಡೆಯಬಹುದಿತ್ತು ಎಂದರು.

ನಿವೇಶನಗಳಿಗೆ, ಖಾತಾಗೆ ಸಂಬಂಧಿಸಿದಂತೆ ವಸೂಲಿ ಮಾಡಲಾಗುತ್ತಿದೆ. ಒಸಿ, ಸಿಸಿಗೆ ಕಮಿಶನ್‌ ನಿಗದಿಯಾಗಿದೆ. ಯಾರೂ ಮನೆ ಕಟ್ಟಲು ಸಾಧ್ಯವಿಲ್ಲ. ಅಭಿವೃದ್ಧಿ ಶುಲ್ಕವನ್ನು 4-5 ಲಕ್ಷ ರೂ. ಗೆ ಏರಿಸಲಾಗಿದೆ. ಕರ್ನಾಟಕವೆಂದರೆ ಕಲೆಕ್ಷನ್‌ ಸೆಂಟರ್‌ ಆಗಿದೆ ಎಂದರು.

ಕಾಂಗ್ರೆಸ್‌ ಸರ್ಕಾರ ವಯನಾಡಿನಲ್ಲಿದೆ. ಹಿಂದೆ ಆನೆಯಿಂದ ಸತ್ತಿದ್ದಕ್ಕೆ ಪರಿಹಾರ ಕೊಟ್ಟಿದ್ದರು. ಈಗ ವಯನಾಡಿನಲ್ಲಿ ಪ್ರವಾಸ ಮಾಡಿ ಎಂದು ಜಾಹೀರಾತು ನೀಡುತ್ತಿದ್ದಾರೆ. ಅಲ್ಲಿ ಕರ್ನಾಟಕದ ಯಾವುದೇ ಸ್ಥಳ ಇಲ್ಲ. ಜೋಗ, ಹಂಪಿ, ಕೊಡಗು, ಗೋಕರ್ಣದಲ್ಲಿರುವಂತಹ ಸ್ಥಳ ವಯನಾಡಿನಲ್ಲಿ ಇಲ್ಲ. ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ಅವರ ಫ್ಲೆಕ್ಸ್‌ ನೋಡಲು ಜನರು ಅಲ್ಲಿಗೆ ಪ್ರವಾಸ ಹೋಗಬೇಕಿದೆ. ಮೈಸೂರು ಅರಮನೆ ಬಗ್ಗೆ ಪ್ರಚಾರ ಮಾಡುವುದನ್ನು ಬಿಟ್ಟು ವಯನಾಡಿನ ರಾಹುಲ್‌ ಗಾಂಧಿ ಅರಮನೆ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

7 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

8 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

15 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

15 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

20 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

20 hours ago