ರಾಜ್ಯ

ಆಗಸ್ಟ್.‌1ರೊಳಗೆ ಒಳಮೀಸಲಾತಿ ಜಾರಿ ಮಾಡದಿದ್ದರೆ ಹೋರಾಟ: ಬಿಜೆಪಿ ಎಚ್ಚರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ಆಗಸ್ಟ್ 1ರೊಳಗೆ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿಯನ್ನು ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ ಹಾಗೂ ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಆ.1ರೊಳಗೆ ಒಳಮೀಸಲಾತಿ ಜಾರಿ ಮಾಡಬೇಕೆಂದು ಒತ್ತಾಯಿಸಿದರು.

ಸಂಸದ ಗೋವಿಂದ ಕಾರಜೋಳ ಮಾತನಾಡಿ, ಮುಂದಿನ ತಿಂಗಳ ಆಗಸ್ಟ್.1ರೊಳಗೆ ಎಸ್ಸಿ ಒಳಮೀಸಲಾತಿ ಜಾರಿ ಮಾಡಬೇಕು. ನ್ಯಾಯಾಲಯವು ಈಗಾಗಲೇ ಸ್ಪಷ್ಟ ಆದೇಶ ನೀಡಿದೆ. ಈಗಾಗಲೇ ಸಾಕಷ್ಟು ವಿಳಂಬವಾಗಿದ್ದು, ಇನ್ನು ನಮ್ಮ ಸಮುದಾಯದ ಸಹನೆಯನ್ನು ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ಕೊಟ್ಟರು.

ಆಗಸ್ಟ್.1ರ ತನಕ ನಾವು ಕಾಯುತ್ತೇವೆ. ಅಷ್ಟರೊಳಗೆ ಸರ್ಕಾರ ಎಲ್ಲವನ್ನು ಸರಿಪಡಿಸಿ ಜಾರಿ ಮಾಡದಿದ್ದರೆ ಆ.16ರಿಂದ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಅಸಹಕಾರ ಹೋರಾಟ ಮಾಡುತ್ತೇವೆ. ತಾಲ್ಲೂಕು ಕಚೇರಿಗಳಿಗೆ ಬೀಗ ಹಾಕುವ ಚಳುವಳಿ ಮಾಡುತ್ತೇವೆ ಎಂದು ಗುಡುಗಿದರು.

ಆಂದೋಲನ ಡೆಸ್ಕ್

Recent Posts

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

43 mins ago

ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…

49 mins ago

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ…

1 hour ago

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

2 hours ago

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…

2 hours ago

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…

2 hours ago