ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ಆಗಸ್ಟ್ 1ರೊಳಗೆ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿಯನ್ನು ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.
ವಿಧಾನಪರಿಷತ್ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ ಹಾಗೂ ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಆ.1ರೊಳಗೆ ಒಳಮೀಸಲಾತಿ ಜಾರಿ ಮಾಡಬೇಕೆಂದು ಒತ್ತಾಯಿಸಿದರು.
ಸಂಸದ ಗೋವಿಂದ ಕಾರಜೋಳ ಮಾತನಾಡಿ, ಮುಂದಿನ ತಿಂಗಳ ಆಗಸ್ಟ್.1ರೊಳಗೆ ಎಸ್ಸಿ ಒಳಮೀಸಲಾತಿ ಜಾರಿ ಮಾಡಬೇಕು. ನ್ಯಾಯಾಲಯವು ಈಗಾಗಲೇ ಸ್ಪಷ್ಟ ಆದೇಶ ನೀಡಿದೆ. ಈಗಾಗಲೇ ಸಾಕಷ್ಟು ವಿಳಂಬವಾಗಿದ್ದು, ಇನ್ನು ನಮ್ಮ ಸಮುದಾಯದ ಸಹನೆಯನ್ನು ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ಕೊಟ್ಟರು.
ಆಗಸ್ಟ್.1ರ ತನಕ ನಾವು ಕಾಯುತ್ತೇವೆ. ಅಷ್ಟರೊಳಗೆ ಸರ್ಕಾರ ಎಲ್ಲವನ್ನು ಸರಿಪಡಿಸಿ ಜಾರಿ ಮಾಡದಿದ್ದರೆ ಆ.16ರಿಂದ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಅಸಹಕಾರ ಹೋರಾಟ ಮಾಡುತ್ತೇವೆ. ತಾಲ್ಲೂಕು ಕಚೇರಿಗಳಿಗೆ ಬೀಗ ಹಾಕುವ ಚಳುವಳಿ ಮಾಡುತ್ತೇವೆ ಎಂದು ಗುಡುಗಿದರು.
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…