ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ವಿಧಾನಪರಿಷತ್ನಲ್ಲಿ ಮಾತನಾಡಿದ ಅವರು, ಮೈಸೂರು ನಗರದಲ್ಲಿ 200ಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳಿದ್ದವು. ಪ್ರಸ್ತುತ ನೂರಕ್ಕೆ ಇಳಿಕೆ ಕಂಡಿವೆ. ಎಲ್ಲಾ ಕಟ್ಟಡಗಳನ್ನು ಕೆಡವುಲಾಗಿದೆ. ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಹೇಳಿದರು.
ಮಹಾರಾಜರ ಕಾಲದಲ್ಲಿ ದಸರಾ ವೇಳೆ ಎಲ್ಲಾ ಕಟ್ಟಡಗಳಿಗೂ ಸುಣ್ಣ-ಬಣ್ಣ ಬಳಿದು ನಿರ್ವಹಣೆ ಮಾಡುತ್ತಿದ್ದರು. ಇತ್ತೀಚಿನ ವರ್ಷಗಳಲ್ಲಿ ಅನುದಾನದ ಕೊರತೆಯಿಂದ ನಿರ್ವಹಣೆ ಕುಂಠಿತವಾಗಿದೆ. ಎಲ್ಲಾ ಪ್ರವಾಸಿಗರು ವಿದೇಶಕ್ಕೆ ತೆರಳುವುದು ಅಲ್ಲಿನ ಪಾರಂಪರಿಕ ಕಟ್ಟಡಗಳ ವೀಕ್ಷಣೆ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಹೇಳಿದರು.
ನಮ್ಮ ಪಾರಂಪರಿಕ ಕಟ್ಟಡಗಳನ್ನು ರಕ್ಷಣೆ ಮಾಡದಿದ್ದರೆ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಮುಂದಿನ ಪೀಳಿಗೆಗೆ ತಿಳಿಸಲು ಸಾಧ್ಯವಾಗುವುದಿಲ್ಲ. ಜಿಲ್ಲಾಡಳಿತ ಬಳಿ ಇರುವ ಅನುದಾನ ಸಾಲದು. ಆಸ್ತಿ ತೆರಿಗೆಯಲ್ಲಾದರು ಅನುದಾನ ಒದಗಿಸಲು ಮಂತ್ರಿಗಳ ಅವಕಾಶ ಕಲ್ಪಿಸಬೇಕು ಎಂದು ಕೋರಿದರು.
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…