ರಾಜ್ಯ

ಕಾವೇರಿ ತುಲಾಸಂಕ್ರಮಣ ಜಾತ್ರೆ ಯಶಸ್ವಿಯಾಗಿ ಜರುಗಲು ಅಗತ್ಯ ಸೌಕರ್ಯಗಳನ್ನ ಕಲ್ಪಿಸಿ: ಸಚಿವ ಭೋಸರಾಜು ಸೂಚನೆ

  • ಅಕ್ಟೋಬರ್‌ 17 ಗುರುವಾರ ಬೆಳಿಗ್ಗೆ 7.40 ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತೀರ್ಥೋದ್ಬವ
  • ಭಾಗಮಂಡಲದಲ್ಲಿ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ
  • ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸೂಚನೆ

ಭಾಗಮಂಡಲ : ಅಕ್ಟೋಬರ್‌ 17 ರಂದು ಬೆಳಿಗ್ಗೆ 7.40 ಸಲ್ಲುವ ತುಲಾ ಲಗ್ನದಲ್ಲಿ ಕಾವೇರಿ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಬವ ನಡೆಯಲಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್‌ ಎಸ್‌ ಭೋಸರಾಜು ಸೂಚನೆ ನೀಡಿದರು.

ಹಿಂದಿನ ವರ್ಷ ಯಶಸ್ವಿಯಾಗಿ ಜಾತ್ರೆಯನ್ನು ಆಯೋಜಿಸಲಾಗಿತ್ತು. ರಾತ್ರಿ ನಡೆದ ತೀರ್ಥೋದ್ಭವದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಭಕ್ತಾದಿಗಳು ಭಾಗಿಯಾಗಿದ್ದರು. ಈ ಬಾರಿ ಬೆಳಿಗ್ಗೆ ತೀರ್ಥೋದ್ಭವ ನಡೆಯಲಿರುವ ಹಿನ್ನಲೆಯಲ್ಲಿ ಹೆಚ್ಚಿನ ಜನ ಭಕ್ತಾದಿಗಳು ಭಾಗಿಯಾಗುವ ನಿರೀಕ್ಷೆಯಿದೆ. ಜಾತ್ರೆ ಯಶಸ್ವಿಯಾಗಿ ನಡೆಯಲು ಅಗತ್ಯ ಪೊಲೀಸ್‌ ಭದ್ರತೆಯನ್ನು ಒದಗಿಸಿ, ಸರಳವಾಗಿ ಎಲ್ಲರಿಗೂ ದರ್ಶನಕ್ಕೆ ಮುಕ್ತ ಅವಕಾಶ ಕಲ್ಪಿಸಲು ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಚಿವರು ಸೂಚನೆ ನೀಡಿದರು.

ಕಳೆದ ಬಾರಿ ಕಲ್ಪಿಸಿದ್ದ ರೀತಿಯಲ್ಲಿಯೇ ಉಚಿತವಾಗಿ ಕೆಎಸ್‌ಆರ್‌ಟಿಸಿ ಬಸ್ ಗಳ ಮೂಲಕ ಸಾರಿಗೆ ವ್ಯವಸ್ಥೆ ಕಲ್ಪಿಸಿದರೆ ವಾಹನಗಳ ದಟ್ಟಣೆ ಕಡಿಮೆಯಾಗಲಿದೆ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.

ಮಡಿಕೇರಿ ರಸ್ತೆಯಿಂದ ತಲಕಾವೇರಿಯವರೆಗೆ ರಸ್ತೆ ಉದ್ದಕ್ಕೂ ಎರಡು ಬದಿಗಳ್ಲಲಿ ಬೆಳೆದು ನಿಂತಿರುವ ಕಾಡುಗಳನ್ನು ಕಡಿದು, ಸುಗಮ ಸಾರಿಗೆ ಸಂಚಾರ ವ್ಯವಸ್ಥೆಯನ್ನು ಸುಗುಮಗೊಳಿಸಬೇಕು. ವನ್ಯಜೀವಿಗಳಿಂದ ಹಾನಿಯಾಗದೇ ಇರುವ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕ್ಷೇತ್ರದಲ್ಲಿ ಸ್ವಚ್ಚತೆ, ಸಮರ್ಪಕ ವಿದ್ಯುತ್‌ ವ್ಯವಸ್ಥೆ, ರಸ್ತೆಗಳನ್ನು ಸುಸ್ಥತಿಯಲ್ಲಿಡುವುದು, ಆರೋಗ್ಯ ತುರ್ತು ಪರಿಸ್ಥಿತಿಗಳಿಗೆ ಅಗತ್ಯ ತಯಾರಿ, ಶೌಚಾಲಯದ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ತಿಂಗಳ ಅಂತ್ಯದೊಳಗೆ ಅಗತ್ಯ ಕ್ರಮಗಳನ್ನು ಕೈಗೊಂಡು ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಪೊನ್ನಣ್ಣ, ಜಿಲ್ಲಾಧಿಕಾರಿಗಳಾದ ವೆಂಕಟ್‌ ರಾಜಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

11 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

11 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

12 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

12 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

12 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

13 hours ago