ರಾಜ್ಯ

ಬೇಡಿಕೆ ಇರುವ ಉದ್ಯೋಗಕ್ಕೆ ತಕ್ಕಂತೆ ತರಬೇತಿ ನೀಡಿ ; ಸಿಎಂ

ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಅಮೃತ ಮಹೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಬೇಡಿಕೆಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ಸಭೆ ಕರೆದು ಈ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಉದ್ಯೋಗಗಳಿಗೆ ಅಭ್ಯರ್ಥಿಗಳಿಗನ್ನು ತರಬೇತಿ ನೀಡಿ ತಯಾರು ಮಾಡಬೇಕು. ಕೌಶಲ್ಯಾಭಿವೃದ್ಧಿ ಅತ್ಯಗತ್ಯ ಎಂದು ಮನಗಂಡು ಈ ನಿಟ್ಟಿನಲ್ಲಿ ರಾಜ್ಯ ಅಭಿವೃದ್ಧಿಯಾಗುತ್ತಿದೆ ಎಂದರು.

ಸಂಘಟನೆಯ ದೃಷ್ಟಿಯಿಂದ ಅಮೃತ ಮಹೋತ್ಸವ ಪ್ರಮುಖವಾದ ಮೈಲಿಗಲ್ಲು

1947 ರಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಆರಾಧ್ಯ ಅವರು15 ಜನ ಸದಸ್ಯಯರನ್ನೊಳಗೊಂಡ ಈ ಸಂಸ್ಥೆಯನ್ನು ಸಣ್ಣ ಕೊಠಡಿಯೊಂದರಲ್ಲಿ ಪ್ರಾರಂಭಿಸಿದ್ದು, ಇಂದು 13 ಸಾವಿರ ಸದಸ್ಯರನ್ನು ಹೊಂದಿದೆ. ಅಮೃತ ಮಹೋತ್ಸವ ಸಮಾರಂಭದಲ್ಲಿ ಕನಿಷ್ಠ ಒಂದು ಸಾವಿರ ಜನರಾದರೂ ಭಾಗವಹಿ ಸಬೇಕಿತ್ತು ಎಂದು ಅಭಿಪ್ರಾಯ ಪಟ್ಟರು. ಸಂಘಟನೆಯ ದೃಷ್ಟಿಯಿಂದ ರಜತ, ಸುವರ್ಣ ಹಾಗೂ ಅಮೃತ ಮಹೋತ್ಸವ ಪ್ರಮುಖವಾದ ಮೈಲಿಗಲ್ಲುಗಳು. ಸಂಸ್ಥೆಯ ಸದಸ್ಯತ್ವ ಒಂದು ಲಕ್ಷಕ್ಕೆ ಏರಲಿ ಎಂದ ಮುಖ್ಯಮಂತ್ರಿಗಳು ಎಂ.ಎಸ್.ಎಂ. ಇ ಗಳು ಬೆಳೆದಂತೆಲ್ಲ ರಾಜ್ಯದ ಅಭಿವೃದ್ಧಿಯಾಗಲು ಸಾಧ್ಯ ಎಂದರು.

ಕಾಸಿಯಾ ರಾಜ್ಯದ ಅಭಿವೃದ್ಧಿಯ ಪಾಲುದಾರ
ಕಾಸಿಯಾ ಕೇವಲ ಉದ್ಯೋಗದಾತ ಮಾತ್ರವಲ್ಲದೆ ರಾಜ್ಯದ ಅಭಿವೃದ್ಧಿಯ ಪಾಲುದಾರ ಕೂಡ ಹೌದು. ರಾಜ್ಯದ ಅಭಿವೃದ್ಧಿಯಾದಂತೆ ತಲಾದಾಯ ಕೂಡ ಹೆಚ್ಚಾಗುತ್ತದೆ. ಕರ್ನಾಟಕ ಅಭಿವೃದ್ಧಿಶೀಲ ರಾಜ್ಯ. 20 ಲಕ್ಷ ಕ್ಕೂ ಹೆಚ್ಚು ಎಂ.ಎಸ್.ಎಂ. ಇ ಗಳು ಸೇರಿ 185 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಜಿಸಲಾಗಿದೆ. ಇದು ಇನ್ನೂ ಹೆಚ್ಚಾಗಬೇಕೆಂದು ಬಯಸುತ್ತೇನೆ ಎಂದರು

ಕೃಷಿ ಕ್ಷೇತ್ರವನ್ನು ಬಿಟ್ಟರೆ ಹೆಚ್ಚು ಉದ್ಯೋಗ ನೀಡುವುದು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳು
ಕರ್ನಾಟಕದಲ್ಲಿ 7 ಕೋಟಿ ಜನಸಂಖ್ಯೆ ಇದೆ. ಕೃಷಿ ಕ್ಷೇತ್ರವನ್ನು ಬಿಟ್ಟರೆ ಹೆಚ್ಚು ಉದ್ಯೋಗ ನೀಡುವುದು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳು. ಹಿಂದೆ ದಾಬಸ್ ಪೇಟೆಯಲ್ಲಿ 400 ಎಕರೆ ಕಾಸಿಯಾದವರಿಗೆ ಮಂಜೂರು ಮಾಡಿದ್ದನ್ನು ಸಿಎಂ ಸ್ಮರಿಸಿದರು. ಮಾರುಕಟ್ಟೆ ದರದ ಅರ್ಧದಷ್ಟು ದರದಲ್ಲಿ ಇದನ್ನು ಮಂಜೂರು ಮಾಡಿದ್ದು, ಕೌಶಲ್ಯ ಅಭಿವೃದ್ಧಿ ನೀಡುವ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದರು
ಸರ್ಕಾರ ಮೊದಲಿನಿಂದಲೂ ಕಾಸಿಯಾ ಸಂಸ್ಥೆಗೆ ಬೆಂಬಲ ನೀಡುತ್ತಾ ಬಂದಿದೆ. ಉತ್ಪಾದನಾ ಪ್ರಕ್ರಿಯೆಯಲ್ಲಿ ಭಾಗವಹಿಸುವವರು ರಾಷ್ಟ್ರ ನಿರ್ಮಾಣದಲ್ಲಿ ತೊಡಗಬೇಕು.ಈ ಬಗ್ಗೆ ಆಸಕ್ತಿ ಮತ್ತು ಶಕ್ತಿ ಎರಡೂ ಇರಬೇಕು ಎಂದರು.ರಾಜ್ಯದ ಜನಸಂಖ್ಯೆಯನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬಬೇಕು.ಆಗ ಮಾತ್ರ ಸಮಾನತೆ ತರಲು ಸಾಧ್ಯ ಎಂದರು. ಅರ್ಹತೆ ಇಲ್ಲದವರಿಗೆ ತರಬೇತಿ ನೀಡಬೇಕು. ಕೆಲಸಕ್ಕೆ ಯೋಗ್ಯರನ್ನಾಗಿಸಬೇಕು. ಕರ್ನಾಟಕ ಆರ್ಥಿಕವಾಗಿ ಬೆಳವಣಿಗೆಯಾಗುತ್ತದೆ ಎಂದರು.

ರಾಜ್ಯದಿಂದ 4.50 ಲಕ್ಷ ಕೋಟಿ ತೆರಿಗೆ ಕೇಂದ್ರಕ್ಕೆ ಹೋಗುತ್ತಿದೆ. 65-70ಸಾವಿರ ಕೋಟಿ ಮಾತ್ರ ನಮಗೆ ವಾಪಸ್ಸು ಬರುತ್ತದೆ. ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ ಎಂದು ರಾಜ್ಯಕ್ಕೆ ಅನ್ಯಾಯವಾಗಬಾರದು ಎಂದರು. ರಾಜ್ಯ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುತ್ತದೆ. ರಾಜ್ಯಗಳು ಸೊರಗಿದರೆ ಕೇಂದ್ರವೂ ಸೊರಗುತ್ತದೆ ಎಂದರು. ಕೇಂದ್ರ ಸರ್ಕಾರ ಕನಿಷ್ಠ 50% ತೆರಿಗೆಯ ಪಾಲನ್ನು ರಾಜ್ಯಕ್ಕೆ ಕೊಡಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.

ಹೂಡಿಕೆಗೂ ಕಾನೂನು ಸುವ್ಯಸ್ಥೆಗೂ ನೇರವಾದ ಸಂಬಂಧವಿದೆ
ದೇಶದಲ್ಲಿ ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದರು. ರಾಜ್ಯದಲ್ಲಿ ಕೈಗಾರಿಕೆ ಬೆಳವಣಿಗೆಗೆ ಯತ್ನಿಸಲಾಗುತ್ತಿದೆ. ಕೈಗಾರಿಕೆಗಳ ಹೂಡಿಕೆಗೂ ಕಾನೂನು ಸುವ್ಯಸ್ಥೆಗೂ ನೇರವಾದ ಸಂಬಂಧವಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಣ್ಣ ಕೈಗಾರಿಕೆಗಳ ಹಾಗು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣ ಬಸಪ್ಪ ದರ್ಶನಾಪುರ, ಶಾಸಕ ರಘುಮೂರ್ತಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ , ಕಾಸಿಯಾ ಅಧ್ಯಕ್ಷ ರಾಜಗೋಪಾಲ್, ಉಪಾಧ್ಯಕ್ಷ, ಗಣೇಶ್ ರಾವ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

30 mins ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

2 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

2 hours ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

3 hours ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

3 hours ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

4 hours ago