ರಾಜ್ಯ

ಸಮೀಕ್ಷೆಗೆ ಮಾಹಿತಿ ನೀಡಿದರೆ ಮುಂದಿನ ಪೀಳಿಗೆಗೆ ಅನುಕೂಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಾರ್ವಜನಿಕರು ತಾಳೆಯಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಮಾಹಿತಿ ನೀಡಿದರೆ ಮುಂದಿನ ಪೀಳಿಗೆಗೆ ಅನುಕೂಲವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ ಇಂದು ಸಮೀಕ್ಷೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ಮಾಹಿತಿ ನೀಡಬೇಕು. ಮುಂದಿನ ದಿನಗಳಲ್ಲಿ ಆನ್‍ಲೈನ್‍ನಲ್ಲೂ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗುತ್ತದೆ. ಉದ್ಯೋಗಕ್ಕೆ ಹೊರ ರಾಜ್ಯಗಳಿಗೆ ಹೋಗಿರುವರಿಗೆ ಪ್ರತ್ಯೇಕ ಸಂಖ್ಯೆ ನೀಡಲಾಗುವುದು ಅದನ್ನು ಆಧರಿಸಿ, ಆನ್‍ಲೈನ್‍ನಲ್ಲಿ ಮಾಹಿತಿ ನೀಡಬೇಕು ಎಂದು ಹೇಳಿದರು.

ಮಾಹಿತಿ ನೀಡುವಂತೆ ತಿಳುವಳಿಕೆ ನೀಡುವುದು ರಾಜ್ಯ ಸರ್ಕಾರದ ಕರ್ತವ್ಯ. ಅದನ್ನು ಮಾಡುತ್ತಿದ್ದೇವೆ. ಮಾಹಿತಿ ನೀಡದಿದ್ದರೆ ನಾವೇನು ಮಾಡಲಾಗುವುದಿಲ್ಲ. ಎಲ್ಲಾ ಜಾತಿಗಳು, ಧರ್ಮಗಳು ಸಮೀಕ್ಷೆಯಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ :-5 ವರ್ಷ ಸಿದ್ದರಾಮಯ್ಯನವರೇ ಸಿಎಂ: ಸಚಿವ ಜಮೀರ್‌ ಅಹಮ್ಮದ್‌

ಪ್ರಶ್ನಾವಳಿಗಳ ಸಂಖ್ಯೆ ಹೆಚ್ಚಾಗಿದೆ. ಅವುಗಳನ್ನು ಕಡಿಮೆ ಮಾಡಬೇಕು ಎಂದು ನಾನೂ ಕೂಡ ಸಲಹೆ ನೀಡಿದ್ದೆ. ಆದರೆ ಪ್ರಶ್ನೆಗಳ ಸಂಖ್ಯೆ ಅಷ್ಟೆ ಇವೆ. ಇಂದಿನ ಸಮೀಕ್ಷೆಯಲ್ಲಿ ನನ್ನನ್ನು ಕೆಲ ಪ್ರಶ್ನೆಗಳನ್ನು ಕೇಳಲಾಯಿತು. ಅದನ್ನೆಲ್ಲಾ ನನ್ನ ಬಳಿ ಕೇಳಬೇಡಿ ಎಂದು ಹೇಳಿದ್ದೇನೆ. ಅಗತ್ಯದಷ್ಟು ಮಾಹಿತಿ ನೀಡಬಹುದು. ಅನಗತ್ಯವಾದ ಪ್ರಶ್ನೆಗಳು ಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ಅಷ್ಟೊಂದು ಪ್ರಶ್ನೆಗಳಿಗೆ ಉತ್ತರ ನೀಡಲು ನಗರ ಪ್ರದೇಶದಲ್ಲಿ ಯಾರಿಗೂ ತಾಳ್ಮೆ ಇರುವುದಿಲ್ಲ. ಅಷ್ಟೊಂದು ಪ್ರಶ್ನೆಗಳಿರುವುದು ಇವತ್ತೆ ನನ್ನ ಗಮನಕ್ಕೆ ಬಂದಿದ್ದಾಗಿ ಹೇಳಿದರು. ಕೋಳಿಗಳು ಎಷ್ಟಿವೆ, ಮೇಕೆ ಎಷ್ಟಿವೆ, ಚಿನ್ನ ಎಷ್ಟಿದೆ ಎಂದು ಕೇಳುತ್ತಾ ಕುಳಿತರೆ ಜನ ಉತ್ತರಿಸುವುದಿಲ್ಲ. ನಗರ ಪ್ರದೇಶಗಳಲ್ಲಿ ಮೇಕೆ ಸಾಕಲಾಗುವುದಿಲ್ಲ. ಬಹುಶಃ ಹಿಂದುಳಿದ ವರ್ಗಗಳ ಆಯೋಗ ಈ ರೀತಿಯ ಪ್ರಶ್ನೆಗಳ ಸರಿಪಡಿಸುತ್ತದೆ. ನ್ಯಾಯಾಲಯವೂ ಇದನ್ನೆಲ್ಲಾ ಗಮನಿಸಿಯೇ ಮಾಹಿತಿಗಾಗಿ ಬಲವಂತ ಪಡಿಸಬಾರದು ಎಂದು ಹೇಳಿದರು.

ಸಮೀಕ್ಷಾದಾರರು ನನ್ನ ಬಳಿ ಕೇಳಿದಾಗ ಉದ್ಭವಿಸುವುದಿಲ್ಲ ಎಂದು ಹೇಳಿದ್ದೇನೆ. ಬೆಂಗಳೂರು ನಗರದಲ್ಲಿ ಸಮೀಕ್ಷೆ ಮಾಡುವಾಗ ಸೂಕ್ಷ್ಮವಾಗಿ ನಡೆದುಕೊಳ್ಳುವಂತೆ ಸಲಹೆ ನೀಡಿದ್ದೇನೆ. ಜಿಎಸ್‍ಟಿ ಕಡಿತದಿಂದ ರಾಜ್ಯ ಸರ್ಕಾರಕ್ಕೆ 15 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು. ನಮ್ಮ ತೆರಿಗೆ ನಮ್ಮ ಹಕ್ಕು, ಅದಕ್ಕಾಗಿ ನ್ಯಾಯಾಂಗ ಹೋರಾಟ ನಡೆಸಲು ನಾವು ಸಿದ್ಧ ಎಂದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

3 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

4 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

5 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

10 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

17 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

17 hours ago