ರಾಜ್ಯ

ಪಿಎಸ್‌ಐ ಮರುಪರೀಕ್ಷೆ ಮತ್ತೆ ಲೀಕ್?‌ ದಾಖಲಾಯಿತು ದೂರು

ಈ ಹಿಂದೆ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದ್ದ ಕಾರಣದಿಂದ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಇದೇ ತಿಂಗಳ 23ರಂದು ಪಿಎಸ್‌ಐ ಮರುಪರೀಕ್ಷೆ ನಡೆಯಬೇಕಿತ್ತು. ಆದರೆ ಇದೀಗ ಈ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಹ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಪರೀಕ್ಷೆ ಬರೆಯಬೇಕಿರುವ ಹಲವು ಅಭ್ಯರ್ಥಿಗಳಿಂದ ಕೇಳಿಬಂದಿದೆ.

ಇಂಟೆಲಿಜೆನ್ಸ್‌ ವಿಭಾಗದ ಸಬ್‌ ಇನ್ಸ್‌ಪೆಕ್ಟರ್‌ ಲಿಂಗಯ್ಯ ಮಾತನಾಡಿರುವ ಆಡಿಯೊದಲ್ಲಿ ಈ ಪ್ರಶ್ನೆ ಪತ್ರಿಕೆಗಳ ಕುರಿತು ಹೇಳಿದ್ದಾರೆ ಎನ್ನಲಾದ ಆಡಿಯೊ ಕ್ಲಿಪ್‌ ಒಂದು ವೈರಲ್‌ ಆಗಿದೆ. ಈ ಆಡಿಯೊದಲ್ಲಿ ಇಂದು ( ಜನವರಿ 20 ) ಹಾಗೂ ನಾಳೆ ( ಜನವರಿ 21 ) ನಡೆಯಲಿರುವ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗಳ ಸಿಇಟಿ ಪರೀಕ್ಷೆಯ ಪತ್ರಿಕೆಗಳ ಬಗ್ಗೆ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ಇದೇ ಆಡಿಯೊದಲ್ಲಿ ಜನವರಿ 23ರಂದು ನಡೆಯಲಿರುವ ಪಿಎಸ್‌ಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಗ್ಗೆ ಸಹ ಮಾತನಾಡಿದ್ದಾರೆ ಎಂದೂ ಸಹ ಆರೋಪ ಕೇಳಿಬಂದಿದೆ.

ದೂರು ನೀಡಿದ ಅಭ್ಯರ್ಥಿಗಳಲ್ಲಿ ಒಬ್ಬರಾದ ಶಾಂತಕುಮಾರ್‌ ಎಂಬುವವರು ಮಾಧ್ಯಮಗಳ ಜತೆ ಮಾತನಾಡಿ 1.60 ಲಕ್ಷ ಅಭ್ಯರ್ಥಿಗಳು ಕಮರ್ಷಿಯಲ್ ಟ್ಯಾಕ್ಸ್ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಆ ಪ್ರಶ್ನೆ ಪತ್ರಿಕೆಯನ್ನೂ ನಾವೇ ಕೊಡುತ್ತೇವೆ. ಉದ್ಯೋಗವನ್ನೂ ಕೊಡಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಜೊತಗೆ, ಪಿಎಸ್‌ಐ ಪರೀಕ್ಷೆಗೂ ಸಹಾಯ ಮಾಡುತ್ತೇವೆ. ಅದರ ಪ್ರಶ್ನೆಪತ್ರಿಕೆಯನ್ನೂ ಕೊಡುತ್ತೇವೆ. ಪಿಎಸ್ ಎಕ್ಸಾಂ ಅನ್ನೂ ಬರೆಸುತ್ತೇವೆ. ಕೆಪಿಎಸ್‌ಸಿ ಬೋರ್ಡ್ ಕಚೇರಿ ಮುಂದೆ ಪರೀಕ್ಷಾ ಅಭ್ಯರ್ಥಿಗಳಿಗೆ ಪ್ರವೇಶವಿಲ್ಲ. ಆದರೆ, ಅವರ ಪೋಷಕರನ್ನು ಒಳಗೆ ಕರೆಸಿಕೊಂಡು ಮಾತನಾಡಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ಆಡಿಯೋನಲ್ಲಿ ಪಿಇಸ್ಐ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಪವನ್, ರಜತ್ ಎಂಬುವರ ಹೆಸರುಗಳು ಕೇಳಿಬಂದಿದೆ. ಪ್ರಶ್ನೆಪತ್ರಿಕೆ ನೀಡಲು, ಪರೀಕ್ಷೆಗೆ ಸಹಾಯ ಮಾಡಲು ಹಾಗೂ ಪೋಸ್ಟಿಂಗ್ ಕುರಿತ ಸಹಾಯ ಮಾಡಲು 80 ಲಕ್ಷ ರೂ ಬೇಡಿಕೆಯನ್ನು ಅಭ್ಯರ್ಥಿಗಳ ಮುಂದಿಟ್ಟಿದ್ದಾರೆ. ಕೆಲವು ರಾಜಕಾರಣಿಗಳ ಹೆಸರನ್ನೂ ಆಡಿಯೋ ಕ್ಲಿಪ್ ನಲ್ಲಿ ಬಳಕೆ ಮಾಡಲಾಗಿದೆ. ಹಾಗಾಗಿ ನಾವು ಪೊಲೀಸರಿಗೆ ದೂರು ನೀಡಿದ್ದೇವೆ ಎಂದೂ ಸಹ ಶಾಂತಕುಮಾರ್‌ ಹೇಳಿದ್ದಾರೆ.

andolana

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

4 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

7 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

7 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

7 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

7 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

9 hours ago