ಈ ಹಿಂದೆ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದ್ದ ಕಾರಣದಿಂದ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಇದೇ ತಿಂಗಳ 23ರಂದು ಪಿಎಸ್ಐ ಮರುಪರೀಕ್ಷೆ ನಡೆಯಬೇಕಿತ್ತು. ಆದರೆ ಇದೀಗ ಈ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಹ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಪರೀಕ್ಷೆ ಬರೆಯಬೇಕಿರುವ ಹಲವು ಅಭ್ಯರ್ಥಿಗಳಿಂದ ಕೇಳಿಬಂದಿದೆ.
ಇಂಟೆಲಿಜೆನ್ಸ್ ವಿಭಾಗದ ಸಬ್ ಇನ್ಸ್ಪೆಕ್ಟರ್ ಲಿಂಗಯ್ಯ ಮಾತನಾಡಿರುವ ಆಡಿಯೊದಲ್ಲಿ ಈ ಪ್ರಶ್ನೆ ಪತ್ರಿಕೆಗಳ ಕುರಿತು ಹೇಳಿದ್ದಾರೆ ಎನ್ನಲಾದ ಆಡಿಯೊ ಕ್ಲಿಪ್ ಒಂದು ವೈರಲ್ ಆಗಿದೆ. ಈ ಆಡಿಯೊದಲ್ಲಿ ಇಂದು ( ಜನವರಿ 20 ) ಹಾಗೂ ನಾಳೆ ( ಜನವರಿ 21 ) ನಡೆಯಲಿರುವ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗಳ ಸಿಇಟಿ ಪರೀಕ್ಷೆಯ ಪತ್ರಿಕೆಗಳ ಬಗ್ಗೆ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ಇದೇ ಆಡಿಯೊದಲ್ಲಿ ಜನವರಿ 23ರಂದು ನಡೆಯಲಿರುವ ಪಿಎಸ್ಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಗ್ಗೆ ಸಹ ಮಾತನಾಡಿದ್ದಾರೆ ಎಂದೂ ಸಹ ಆರೋಪ ಕೇಳಿಬಂದಿದೆ.
ದೂರು ನೀಡಿದ ಅಭ್ಯರ್ಥಿಗಳಲ್ಲಿ ಒಬ್ಬರಾದ ಶಾಂತಕುಮಾರ್ ಎಂಬುವವರು ಮಾಧ್ಯಮಗಳ ಜತೆ ಮಾತನಾಡಿ 1.60 ಲಕ್ಷ ಅಭ್ಯರ್ಥಿಗಳು ಕಮರ್ಷಿಯಲ್ ಟ್ಯಾಕ್ಸ್ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಆ ಪ್ರಶ್ನೆ ಪತ್ರಿಕೆಯನ್ನೂ ನಾವೇ ಕೊಡುತ್ತೇವೆ. ಉದ್ಯೋಗವನ್ನೂ ಕೊಡಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಜೊತಗೆ, ಪಿಎಸ್ಐ ಪರೀಕ್ಷೆಗೂ ಸಹಾಯ ಮಾಡುತ್ತೇವೆ. ಅದರ ಪ್ರಶ್ನೆಪತ್ರಿಕೆಯನ್ನೂ ಕೊಡುತ್ತೇವೆ. ಪಿಎಸ್ ಎಕ್ಸಾಂ ಅನ್ನೂ ಬರೆಸುತ್ತೇವೆ. ಕೆಪಿಎಸ್ಸಿ ಬೋರ್ಡ್ ಕಚೇರಿ ಮುಂದೆ ಪರೀಕ್ಷಾ ಅಭ್ಯರ್ಥಿಗಳಿಗೆ ಪ್ರವೇಶವಿಲ್ಲ. ಆದರೆ, ಅವರ ಪೋಷಕರನ್ನು ಒಳಗೆ ಕರೆಸಿಕೊಂಡು ಮಾತನಾಡಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಅಲ್ಲದೇ ಆಡಿಯೋನಲ್ಲಿ ಪಿಇಸ್ಐ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಪವನ್, ರಜತ್ ಎಂಬುವರ ಹೆಸರುಗಳು ಕೇಳಿಬಂದಿದೆ. ಪ್ರಶ್ನೆಪತ್ರಿಕೆ ನೀಡಲು, ಪರೀಕ್ಷೆಗೆ ಸಹಾಯ ಮಾಡಲು ಹಾಗೂ ಪೋಸ್ಟಿಂಗ್ ಕುರಿತ ಸಹಾಯ ಮಾಡಲು 80 ಲಕ್ಷ ರೂ ಬೇಡಿಕೆಯನ್ನು ಅಭ್ಯರ್ಥಿಗಳ ಮುಂದಿಟ್ಟಿದ್ದಾರೆ. ಕೆಲವು ರಾಜಕಾರಣಿಗಳ ಹೆಸರನ್ನೂ ಆಡಿಯೋ ಕ್ಲಿಪ್ ನಲ್ಲಿ ಬಳಕೆ ಮಾಡಲಾಗಿದೆ. ಹಾಗಾಗಿ ನಾವು ಪೊಲೀಸರಿಗೆ ದೂರು ನೀಡಿದ್ದೇವೆ ಎಂದೂ ಸಹ ಶಾಂತಕುಮಾರ್ ಹೇಳಿದ್ದಾರೆ.
ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…
ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಸಿಯುನ ಉಸ್ತುವಾರಿ ವೈದ್ಯರು…
ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ. ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…
ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…